ಪ್ರಾತಿನಿಧಿಕ ಚಿತ್ರ 
ರಾಜ್ಯ

ಕೆಎಸ್‌ಆರ್‌ಟಿಸಿ-ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರಿಂದ 2000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲು ಸೂಚನೆ!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಹೊಸಕೋಟೆ ಡಿಪೋ ಪ್ರಯಾಣಿಕರಿಂದ 2,000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸದಂತೆ ಆದೇಶ ಹೊರಡಿಸಿದ ನಂತರ, ಬಿಎಂಟಿಸಿ ಕೇಂದ್ರ ಕಚೇರಿ ಸಿಬ್ಬಂದಿಗೆ ಅಂತಹ ಯಾವುದೇ ಆದೇಶಗಳನ್ನು ನೀಡಿಲ್ಲ ಎಂದು ನಿಗಮವು ಭಾನುವಾರ ಸ್ಪಷ್ಟಪಡಿಸಿದೆ.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಹೊಸಕೋಟೆ ಡಿಪೋ ಪ್ರಯಾಣಿಕರಿಂದ 2,000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸದಂತೆ ಆದೇಶ ಹೊರಡಿಸಿದ ನಂತರ, ಬಿಎಂಟಿಸಿ ಕೇಂದ್ರ ಕಚೇರಿ ಸಿಬ್ಬಂದಿಗೆ ಅಂತಹ ಯಾವುದೇ ಆದೇಶಗಳನ್ನು ನೀಡಿಲ್ಲ ಎಂದು ನಿಗಮವು ಭಾನುವಾರ ಸ್ಪಷ್ಟಪಡಿಸಿದೆ.

ಇನ್ನು ಬಿಎಂಟಿಸಿ, 'ಕೆಲವು ಗೊಂದಲಗಳಿಂದ ಹೊಸಕೋಟೆ ಡಿಪೋ 2,000 ಮುಖಬೆಲೆಯ ನೋಟುಗಳನ್ನು ತೆಗೆದುಕೊಳ್ಳದಂತೆ ಆದೇಶ ಹೊರಡಿಸಿದೆ. ಆದರೆ, ಈ ಆದೇಶವನ್ನು ಹಿಂಪಡೆಯಲಾಗಿದೆ. ಬಿಎಂಟಿಸಿ ಬಸ್‌ಗಳು 2,000 ರೂ. ನೋಟುಗಳನ್ನು ಸ್ವೀಕರಿಸುತ್ತಿವೆ ಎಂದು ತಿಳಿಸಿದೆ.

ಪ್ರಯಾಣಿಕರಿಂದ 2 ಸಾವಿರ ಮುಖಬೆಲೆಯ ನೋಟುಗಳನ್ನು ಪಡೆಯಬಾರದು ಎಂದು ಆದೇಶ ಹೊರಡಿಸಲಾಗಿತ್ತು. ಆದರೆ, ಈ ಬಗ್ಗೆ ಬಿಎಂಟಿಸಿ ಕೇಂದ್ರ ಕಚೇರಿಯಿಂದ ಯಾವುದೇ ಆದೇಶ ಇಲ್ಲದಿರುವುದರಿಂದ, ಈ ಆದೇಶವನ್ನು ಹಿಂಪಡೆಯಲಾಗಿದೆ. ಇನ್ಮುಂದೆ ಸಂಸ್ಥೆಯ ಎಲ್ಲಾ ಸಿಬ್ಬಂದಿಯು 2 ಸಾವಿರ ಮುಖಬೆಲೆಯ ನೋಟುಗಳನ್ನು ಪ್ರಯಾಣಿಕರಿಂದ ಸ್ವೀಕರಿಸಬೇಕೆಂದು ಸೂಚಿಸಲಾಗುತ್ತಿದೆ ಎಂದು ಬಿಎಂಟಿಸಿ ಸುತ್ತೋಲೆಯಲ್ಲಿ ತಿಳಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮೇ 19 ರಂದು ತನ್ನ ‘ಕ್ಲೀನ್ ನೋಟ್ ನೀತಿ’ಗೆ ಅನುಗುಣವಾಗಿ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು. ಅಂತಹ ನೋಟುಗಳನ್ನು ತಮ್ಮ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಅಥವಾ ಯಾವುದೇ ಬ್ಯಾಂಕ್ ಶಾಖೆಯಲ್ಲಿ ಒಂದು ಬಾರಿಗೆ ₹ 20,000 ವರೆಗೆ ಸೆಪ್ಟೆಂಬರ್ 30 ರೊಳಗೆ ನೋಟುಗಳ ವಿನಿಮಯ ಮಾಡಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಿದೆ.

ಭಾನುವಾರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಸಹ ಪತ್ರಿಕಾ ಹೇಳಿಕೆಯನ್ನು ನೀಡಿದ್ದು, ನಿಗಮದ ಬಸ್‌ಗಳು ಪ್ರಯಾಣಿಕರಿಂದ 2,000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸುವುದನ್ನು ಮುಂದುವರಿಸುತ್ತವೆ ಎಂದು ಸ್ಪಷ್ಟಪಡಿಸಿದೆ. 'ದಯವಿಟ್ಟು ಗಮನಿಸಿ, ಕೆಎಸ್‌ಆರ್‌ಟಿಸಿ 2000 ರೂ. ನೋಟುಗಳನ್ನು ತೆಗೆದುಕೊಳ್ಳದಂತೆ ಸಿಬ್ಬಂದಿಗೆ ಅಂತಹ ಯಾವುದೇ ಆದೇಶವನ್ನು ನೀಡಿಲ್ಲ' ಎಂದು ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT