ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಬೀದರ್‌ ಮೂಲದ ಯುವಕ ಆತ್ಮಹತ್ಯೆ 

ಬೆಂಗಳೂರು ನಗರದ ಪೇಯಿಂಗ್ ಗೆಸ್ಟ್ ಕಟ್ಟಡವೊಂದರ ಕೊಠಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಅಭಿಷೇಕ್ (19) ಎಂಬ ಯುವಕ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ನಗರದ ಪೇಯಿಂಗ್ ಗೆಸ್ಟ್ ಕಟ್ಟಡವೊಂದರ ಕೊಠಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಅಭಿಷೇಕ್ (19) ಎಂಬ ಯುವಕ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೀದರ್ ಜಿಲ್ಲೆಯ ಅಭಿಷೇಕ್ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲೆಂದು ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದರು. ಮೈಕೊಲೇಔಟ್ ಬಳಿ ಇರುವ ಸಂಬಂಧಿಕರ ಮನೆಯಲ್ಲಿ ಕೆಲವು ದಿನ ಇದ್ದ ಅಭಿಷೇಕ್, ಕೆಲದಿನಗಳ ಹಿಂದಷ್ಟೇ ವಿಜಯನಗರ ಬಳಿಯ ಮಾರೇನಹಳ್ಳಿಯ ಪೇಯಿಂಗ್ ಗೆಸ್ಟ್ ವಸತಿಗೆ ಸ್ಥಳಾಂತರಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಭಿಷೇಕ್ ನಿತ್ಯವೂ ತರಬೇತಿ ಸಂಸ್ಥೆ ಹಾಗೂ ಗ್ರಂಥಾಲಯಕ್ಕೆ ಹೋಗಿ ಬರುತ್ತಿದ್ದರು. ಶನಿವಾರ ಬೆಳಿಗ್ಗೆ ಸ್ನೇಹಿತರ ಜೊತೆ ಉಪಾಹಾರ ತಿಂದ ಬಳಿಕ ಅಭಿಷೇಕ್ ಕೊಠಡಿಗೆ ಹೋಗಿದ್ದರು. ಆದರೆ, ಆತ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೆಲಹೊತ್ತಿನ ನಂತರ ಸ್ನೇಹಿತರು ಹಿಂತಿರುಗಿ ನೋಡಿದಾಗ ವಿಷಯ ಬೆಳಕಿಗೆ ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದರು.

ಎರಡು ದಿನಗಳಿಂ ದ ಅಭಿಷೇಕ್ ಮೊಬೈಲ್ ಬಳಸಿಲ್ಲ. ಆತ್ಮಹತ್ಯೆಗೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ, ಪೋಷಕರಿಗೆಮಾಹಿತಿ ನೀಡಲಾಗಿದ್ದು, ಅವರು ನಗರಕ್ಕೆ ಬರುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!