ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ 3 ವರ್ಷಗಳ ಬಳಿಕ ಶೂನ್ಯ ಕೋವಿಡ್ ಪ್ರಕರಣ ದಾಖಲು

ಸಾಂಕ್ರಾಮಿಕ ರೋಗ ಆರಂಭವಾದ ಸುಮಾರು 3 ವರ್ಷಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಶೂನ್ಯ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು: ಸಾಂಕ್ರಾಮಿಕ ರೋಗ ಆರಂಭವಾದ ಸುಮಾರು 3 ವರ್ಷಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಶೂನ್ಯ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ರಾಜ್ಯ ರಾಜಧಾನಿಯಲ್ಲಿ ಶನಿವಾರ ಒಟ್ಟು 1,985 ಪರೀಕ್ಷೆಗಳನ್ನು ನಡೆಸಲಾಗಿದ್ದರೂ ಯಾವುದೇ ಸೋಂಕುಗಳು ಪತ್ತೆಯಾಗಿಲ್ಲ. ನಗರದಲ್ಲಿ ಕೇವಲ 12 ಸಕ್ರಿಯ ಪ್ರಕರಣಗಳು ವರದಿಯಾಗಿದ್ದು, ಆರು ಪ್ರಕರಣಗಳು ಶಿವಮೊಗ್ಗದಲ್ಲಿಯೇ ವರದಿಯಾಗಿವೆ ಎಂದು ತಿಳಿದುಬಂದಿದೆ.

ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಮಾತನಾಡಿ, "ಕರ್ನಾಟಕದಲ್ಲಿ ಕೋವಿಡ್ ಪರಿಸ್ಥಿತಿಯು ಶೂನ್ಯ ಹಂತವನ್ನು ತಲುಪಿದೆ, ರೋಗಲಕ್ಷಣ ಇರುವವರು ಪರೀಕ್ಷೆಗೆ ಮುಂದಾಗುತ್ತಿಲ್ಲ. ಹೀಗಾಗಿ ಪರೀಕ್ಷೆಗಳ ಸಂಖ್ಯೆಯು ಒಂದೇ ರೀತಿಯಲ್ಲಿದೆ. ಸಕ್ರಿಯ ಪ್ರಕರಣ ಸಂಖ್ಯೆ ಕೂಡ 3-4 ವಾರಗಳಲ್ಲಿ ಮತ್ತಷ್ಟು ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ಏಪ್ರಿಲ್ ಅಂತ್ಯದಿಂದ ರಾಜ್ಯಾದ್ಯಂತ ಪ್ರಕರಣಗಳ ಸಂಖ್ಯೆ 500 ಕ್ಕಿಂತ ಕಡಿಮೆಯಾಗಿದೆ. ಮೇ ತಿಂಗಳ ಆರಂಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆ  ‘ಕೋವಿಡ್‌–19 ಈಗ ಜಾಗತಿಕ ಆರೋಗ್ಯ ತುರ್ತು ಸ್ಥಿತಿ’ಯಾಗಿ ಉಳಿದಿಲ್ಲ ಎಂದು ಘೋಷಿಸಿತ್ತು. ಆದರೂ, ಭವಿಷ್ಯ ಹೊಸ ವೈರಸ್ ಗಳ ಸೃಷ್ಟಿಯಿಂದ ಸಾರಿ, ಐಎಲ್ಐ ಪ್ರಕರಣಗಳು ಹೆಚ್ಚಾಗಬಹುದು. ಹೀಗಾಗಿ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇರುವುದು, ಒಳಚರಂಡಿ ನೀರಿನ ಪರೀಕ್ಷೆಗಳನ್ನು ಮುಂದುವರಿಸುವುದು ಅಗತ್ಯ ಎಂದು ತಜ್ಞರು ಹೇಳಿದ್ದಾರೆ.

ಮೇ.28 ರಂದು ಅಂದರೆ ಭಾನುವಾರ ರಾಜ್ಯದಲ್ಲಿ ಒಟ್ಟು 5,575 ಪರೀಕ್ಷೆಗಳನ್ನು ನಡೆಸಲಾಗಿದ್ದು, 134 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಬೆಂಗಳೂರಿನಲ್ಲಿ 16 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಪಾಸಿಟಿವಿಟಿ ದರ ಶೇ.0.46ರಷ್ಟಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT