ಖಾಸಗಿ ಬಸ್ - ಕಾರು ಮುಖಾಮುಖಿ ಡಿಕ್ಕಿ 
ರಾಜ್ಯ

ಮೈಸೂರು: ಖಾಸಗಿ ಬಸ್- ಕಾರು ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ 10 ಮಂದಿ ಸಾವು

ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.

ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.

ಇಂದು ಮಧ್ಯಾಹ್ನ ಕೊಳ್ಳೇಗಾಲ - ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ ಇನ್ನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಪಘಾತದಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಮೃತಪಟ್ಟಿದ್ದು, ಈ ಪೈಕಿ ಕೆಲವರು ಬಳ್ಳಾರಿ ಜಿಲ್ಲೆಯ ಸಂಗನಕಲ್ ನಿವಾಸಿಗಳಾಗಿದ್ದು, ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಂದ ಚಾಮರಾಜನಗರಕ್ಕೆ ಹೋಗಿದ್ದರು ಎನ್ನಲಾಗಿದೆ.

ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಳ್ಳಾರಿ ಮೂಲದ ಜನಾರ್ದನ್ (45), ಪುನೀತ್ (4), ಶಶಿಕುಮಾರ್(24) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT