ಸತೀಶ್ ಜಾರಕಿಹೊಳಿ 
ರಾಜ್ಯ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಎಲ್ಲರಿಗೂ ಅನ್ವಯವಾಗಲ್ಲ: ಸತೀಶ್ ಜಾರಕಿಹೊಳಿ

ಚುನಾವಣಾ ಸಮಯದಲ್ಲಿ ಹೇಗೆ ಖಾತರಿ ಕಾರ್ಡ್‌ಗಳನ್ನು ಮನೆ-ಮನೆಗೆ ವಿತರಿಸಲಾಗಿದೆಯೋ ಹಾಗೆಯೇ ಎಲ್ಲರಿಗೂ ಖಾತರಿ ಯೋಜನೆಗಳನ್ನು ನೀಡಲು ಸಾಧ್ಯವಿಲ್ಲ.

ಬೆಳಗಾವಿ: ಚುನಾವಣಾ ಸಮಯದಲ್ಲಿ ಹೇಗೆ ಖಾತರಿ ಕಾರ್ಡ್‌ಗಳನ್ನು ಮನೆ-ಮನೆಗೆ ವಿತರಿಸಲಾಗಿದೆಯೋ ಹಾಗೆಯೇ ಎಲ್ಲರಿಗೂ ಖಾತರಿ ಯೋಜನೆಗಳನ್ನು ನೀಡಲು ಸಾಧ್ಯವಿಲ್ಲ. ಚುನಾವಣೆಗೂ ಮುನ್ನ ಕಾಂಗ್ರೆಸ್‌ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಅನ್ವಯ ಆಗಲಿವೆ. ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಚನ್ನಮ್ಮನ ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲಮಂಟಪ ಮಠದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,   ನಿರ್ಗತಿಕರು, ಬಡವರನ್ನು ಗುರುತಿಸಿ ಯೋಜನೆ ತಲುಪಿಸುತ್ತೇವೆ. ಗ್ಯಾರಂಟಿ ಯೋಜನೆ ಜಾರಿ ಸ್ವಲ್ಪ ವಿಳಂಬವಾಗಬಹುದು. ಆದರೆ ಕೊಟ್ಟ ಭರವಸೆ ಈಡೇರಿಸಲು ಸರ್ಕಾರ ಬದ್ಧವಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ರಾಜ್ಯದ ಜನತೆ ನಮ್ಮ ಸರ್ಕಾರದಿಂದ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ, ಚುನಾವಣೆ ಸಂದರ್ಭದಲ್ಲಿ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ, ಖಾತರಿ ಯೋಜನೆಗಳನ್ನು ಈಡೇರಿಸಲು ಸಿದ್ಧರಿದ್ದೇವೆ. ಆದರೆ, ವಿರೋಧ ಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ. ನಾವು ಭರವಸೆ ನೀಡಿದ್ದೇವೆ, ವಿರೋಧ ಪಕ್ಷಗಳಲ್ಲ. ಆದ್ದರಿಂದ, ಖಾತರಿಗಳನ್ನು ಪೂರೈಸಲು ನಮಗೆ ಸ್ವಲ್ಪ ಸಮಯ ಬೇಕಾಗುತ್ತದೆ ಮತ್ತು ಈ ಯೋಜನೆಗಳನ್ನು ಜಾರಿಗೆ ತರಲು ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ಆದಾಯ ತೆರಿಗೆ ಪಾವತಿಸುವವರಿಗೆ ಮತ್ತು ಸರಕಾರಿ ನೌಕರರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಲು ಸಾಧ್ಯವಿಲ್ಲ, ಮೇಲಾಗಿ ಕೆಲವರು ಖಾತರಿ ಯೋಜನೆಗಳು ಬೇಡ ಎಂದು ಹೇಳಿದ್ದಾರೆ. ಆದ್ದರಿಂದ, ಯೋಜನೆಗಳಿಗೆ ಯಾರು ಅರ್ಹರು ಮತ್ತು ಯಾರು ಅಲ್ಲ ಎಂಬುದಕ್ಕೆ ಸರ್ಕಾರವು ನಿಯಮಾವಳಿಗಳೊಂದಿಗೆ ಬರಲಿದೆ. ಮುಂದಿನ ಸಂಪುಟ ಸಭೆಯ ನಂತರ ಯೋಜನೆಗಳ ಸಂಪೂರ್ಣ ವಿವರ ಹೊರಬೀಳಲಿದೆ. ನಾವು  ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಆದರೆ ಷರತ್ತುಗಳಿರುತ್ತವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT