ಸಂಗ್ರಹ ಚಿತ್ರ 
ರಾಜ್ಯ

ಮುಂಗಾರು ಹಂಗಾಮಿನ ವಿಪತ್ತು ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಸೂಚನೆ

ಪೂರ್ವ ಮುಂಗಾರು ಸೇರಿದಂತೆ 2023ನೇ ಸಾಲಿನ ಮುಂಗಾರು ಹಂಗಾಮಿನ ಮಳೆ, ಪ್ರವಾಹ ಪರಿಸ್ಥಿತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಬೇಕು. ಇದಕ್ಕೆ ಬೇಕಾದ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳ: ಪೂರ್ವ ಮುಂಗಾರು ಸೇರಿದಂತೆ 2023ನೇ ಸಾಲಿನ ಮುಂಗಾರು ಹಂಗಾಮಿನ ಮಳೆ, ಪ್ರವಾಹ ಪರಿಸ್ಥಿತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಬೇಕು. ಇದಕ್ಕೆ ಬೇಕಾದ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಹಾಲ್ ನಲ್ಲಿ ತಹಸೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪಶುಪಾಲನೆ, ಕೃಷಿ, ಜೆಸ್ಕಾಂ, ಅಗ್ನಿಶಾಮಕ ಇಲಾಖೆಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.

ಈಗಾಗಲೇ ಬೇಸಿಗೆಯು ಮುಗಿಯುವ ಹಂತಕ್ಕೆ ಬಂದಿದ್ದು, ಬಿಸಿಲು ದಿನೇದಿನೆ ತಗ್ಗುತ್ತ ವಾತಾವರಣ ಬದಲಾಗುತ್ತಿದೆ. ಗಾಳಿ ಮಿಶ್ರಿತ ಗುಡುಗು ಸಿಡಿಲು ಮಳೆಗಳು ಬೀಳಲಾರಂಭಿಸಿವೆ. ಆದ್ದರಿಂದ ಮುಂಗಾರು ಹಂಗಾಮಿನ ಅವಧಿಯಲ್ಲಿ ವಿಪತ್ತುಗಳಿಂದ ಜೀವಹಾನಿ ಮತ್ತು ಇತರೆ ನಷ್ಟ ಉಂಟಾದಲ್ಲಿ ವಿಳಂಬವಿಲ್ಲದೇ ಪರಿಹಾರ ವಿತರಣೆಗೆ ಕ್ರಮ ವಹಿಸಲು ಎಲ್ಲಾ ರೀತಿಯಿಂದ ಸನ್ನದ್ಧರಾಗಬೇಕು ಎಂದು ಸೂಚಿಸಿದರು.

ಮಳೆಗಾಲದ ಸಂದರ್ಭದಲ್ಲಿ ಸಿಡಿಲು ಬಡಿದು, ಮರಬಿದ್ದು, ಮನೆಕುಸಿದು, ಪ್ರವಾಹಕ್ಕೆ ಸಿಲುಕಿ ಮಾನವ ಹಾಗೂ ಜಾನುವಾರುಗಳ ಜೀವ ಹಾನಿಯಾದಲ್ಲಿ ತಹಸೀಲ್ದಾರರು ಖುದ್ದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲಿಸಿ ಕಾಲಮಿತಿಯೊಳಗೆ ಸಂತ್ರಸ್ಥರಿಗೆ ಪರಿಹಾರ ಸಿಗವಂತೆ ಕ್ರಮ ವಹಿಸಿ ಜನತೆಗೆ ಸ್ಪಂದನೆ ನೀಡಬೇಕು.

ಮನೆಗಳಿಗೆ ಹಾನಿಯಾದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಯಿಂದ ಮತ್ತು ನಗರ ಪ್ರದೇಶಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಮೀಕ್ಷೆ ನಡೆಸಿ ಹಾನಿಯಾಗಿರುವುದನ್ನು ಸರಿಯಾಗಿ ಗುರುತಿಸಿ ಸಂಬಂಧಿಸಿದ ತಹಸೀಲ್ದಾರಗೆ ವರದಿ ಮಾಡಬೇಕು. ತಹಸೀಲ್ದಾರರಿಂದ ವರದಿ ಬಂದ ನಂತರ ಮಾರ್ಗಸೂಚಿಯನುಸಾರ ಸಂತ್ರಸ್ಥರಿಗೆ ಪರಿಹಾರ ವಿತರಣೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT