ಐಪಿಎಸ್ ಅಧಿಕಾರಿ ಬಿ. ದಯಾನಂದ 
ರಾಜ್ಯ

ಆಡಳಿತಕ್ಕೆ ಮೇಜರ್ ಸರ್ಜರಿ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ಬಿ.ದಯಾನಂದ ನೇಮಕ

ರಾಜ್ಯ ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗುತ್ತಿದ್ದಂತೆಯೇ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಹಲವು ಐಪಿಎಸ್ ಅಧಿಕಾರಿಗಳನ್ನು ಮಂಗಳವಾರ ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶಿಸಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗುತ್ತಿದ್ದಂತೆಯೇ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಹಲವು ಐಪಿಎಸ್ ಅಧಿಕಾರಿಗಳನ್ನು ಮಂಗಳವಾರ ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶಿಸಿದೆ.

ಗುಪ್ತಚರ ಇಲಾಖೆ ಹೆಚ್ಚುವರಿ ಡಿಜಿಪಿಯಾಗಿದ್ದ ಬಿ. ದಯಾನಂದ ಅವರನ್ನು ಎತ್ತಂಗಡಿ ಮಾಡಿ, ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಎಡಿಜಿಪಿ ಮತ್ತು ಬೆಂಗಳೂರು ನಗರದ ಸಂಚಾರ ವಿಭಾಗದ ವಿಶೇಷ ಆಯುಕ್ತರಾಗಿದ್ದ ಎಂ.ಎ. ಸಲೀಂ ಅವರನ್ನು ಸಿಐಡಿ ಡಿಜಿಯಾಗಿ ನೇಮಿಸಲಾಗಿದೆ.

ಕ್ರಿಮಿನಲ್ ತನಿಖೆ ವಿಭಾಗದ ಎಡಿಜಿಪಿ ಆಗಿದ್ದ ಶರತ್ ಚಂದ್ರ ಅವರನ್ನು ಕೂಡಲೇ ಜಾರಿಗೆ ಬರುವಂತೆ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT