ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಆಪ್ತ ಸಹಾಯಕನಿಂದ ವಂಚನೆಗೊಳಗಾದ ವೈದ್ಯ!

ನಗರ ಮೂಲದ ವೈದ್ಯರೊಬ್ಬರು, ತನ್ನ ಮಾಜಿ ಆಪ್ತ ಸಹಾಯಕನಿಂದ ವಂಚನೆಗೊಳಗಾಗಿದ್ದು, ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮರು ಪಡೆಯಲು ಠಾಣೆ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ನಗರ ಮೂಲದ ವೈದ್ಯರೊಬ್ಬರು, ತನ್ನ ಮಾಜಿ ಆಪ್ತ ಸಹಾಯಕನಿಂದ ವಂಚನೆಗೊಳಗಾಗಿದ್ದು, ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮರು ಪಡೆಯಲು ಠಾಣೆ ಮೆಟ್ಟಿಲೇರಿದ್ದಾರೆ.

ಕೋರಮಂಗಲ 6ನೇ ಬ್ಲಾಕ್ ನಿವಾಸಿ ಡಾ. ಐ.ನವೀನ್ ಕುಮಾರ್ ವಂಚನೆಗೊಳಗಾದ ವೈದ್ಯ. ಇವರಿಗೆ ಹೊಂಗಸಂದ್ರದಲ್ಲಿ ಮೂರು ಅಂತಸ್ತಿನ ವಸತಿ ಕಟ್ಟಡವಿದ್ದು, ಅದರಲ್ಲಿ ಎರಡು ಮನೆಗಳು ಖಾಲಿಯಾಗಿತ್ತು. ಕೋವಿಡ್ ಸಾಂಕ್ರಾಮಿಕ ಮತ್ತಿತರ ಕಾರಣಗಳಿಂದ ಅವರು ಆಸ್ತಿ ಬಗ್ಗೆ ನಿರ್ಲಕ್ಷಿಸಿದ್ದರು.  

ಮೂರು ವರ್ಷಗಳ ನಂತರ ಕಟ್ಟಡಕ್ಕೆ ಭೇಟಿ ನೀಡಿದಾಗ ಎರಡೂ ಮನೆಗಳನ್ನು ಆಕ್ರಮಿಸಿಕೊಂಡಿರುವುದನ್ನು ಕಂಡುಬಂದಿದೆ. ನಂತರ ಬಾಡಿಗೆದಾರರನ್ನು ವಿಚಾರಿಸಿದಾಗ ಮಾಜಿ ಆಪ್ತ ಸಹಾಯಕ ರವಿಕುಮಾರ್ ವೈದ್ಯನಂತೆ ನಟಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಎರಡು ಫ್ಲಾಟ್‌ಗಳನ್ನು ಬಾಡಿಗೆಗೆ ಪಡೆದಿರುವುದು ಕಂಡುಬಂದಿದೆ. ಗುತ್ತಿಗೆ ಒಪ್ಪಂದವನ್ನು ಪರಿಶೀಲಿಸಿದಾಗ ನಕಲಿ ಸಹಿ ನೋಡಿ ಆಘಾತಕ್ಕೊಳಗಾಗಿದ್ದಾರೆ.  ಬಾಡಿಗೆದಾರರು ಆತನೇ ನಿಜವಾದ ಮಾಲೀಕನೆಂದು ನಂಬಲು ನಿರಾಕರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದಾಗ ನವೀನ್ ಬಂಡೆಪಾಳ್ಯ ಠಾಣೆಗೆ ತೆರಳಿ ರವಿಕುಮಾರ್ ಹಾಗೂ ಬಾಡಿಗೆದಾರರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.

ಆರೋಪಿಯು 2020 ರಿಂದ ಏಪ್ರಿಲ್ 2023 ರವರೆಗೆ ಇಬ್ಬರು ಬಾಡಿಗೆದಾರರಿಗೆ ಮನೆಗಳನ್ನು ಗುತ್ತಿಗೆಗೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ವಿವರಣೆ ಕೋರಿ ಇಬ್ಬರು ಬಾಡಿಗೆದಾರರಿಗೆ ನೊಟೀಸ್ ನೀಡಲಾಗಿದೆ ಎಂದು ತನಿಖೆ ನಡೆಸುತ್ತಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT