ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಆಪ್ತ ಸಹಾಯಕನಿಂದ ವಂಚನೆಗೊಳಗಾದ ವೈದ್ಯ!

ನಗರ ಮೂಲದ ವೈದ್ಯರೊಬ್ಬರು, ತನ್ನ ಮಾಜಿ ಆಪ್ತ ಸಹಾಯಕನಿಂದ ವಂಚನೆಗೊಳಗಾಗಿದ್ದು, ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮರು ಪಡೆಯಲು ಠಾಣೆ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ನಗರ ಮೂಲದ ವೈದ್ಯರೊಬ್ಬರು, ತನ್ನ ಮಾಜಿ ಆಪ್ತ ಸಹಾಯಕನಿಂದ ವಂಚನೆಗೊಳಗಾಗಿದ್ದು, ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮರು ಪಡೆಯಲು ಠಾಣೆ ಮೆಟ್ಟಿಲೇರಿದ್ದಾರೆ.

ಕೋರಮಂಗಲ 6ನೇ ಬ್ಲಾಕ್ ನಿವಾಸಿ ಡಾ. ಐ.ನವೀನ್ ಕುಮಾರ್ ವಂಚನೆಗೊಳಗಾದ ವೈದ್ಯ. ಇವರಿಗೆ ಹೊಂಗಸಂದ್ರದಲ್ಲಿ ಮೂರು ಅಂತಸ್ತಿನ ವಸತಿ ಕಟ್ಟಡವಿದ್ದು, ಅದರಲ್ಲಿ ಎರಡು ಮನೆಗಳು ಖಾಲಿಯಾಗಿತ್ತು. ಕೋವಿಡ್ ಸಾಂಕ್ರಾಮಿಕ ಮತ್ತಿತರ ಕಾರಣಗಳಿಂದ ಅವರು ಆಸ್ತಿ ಬಗ್ಗೆ ನಿರ್ಲಕ್ಷಿಸಿದ್ದರು.  

ಮೂರು ವರ್ಷಗಳ ನಂತರ ಕಟ್ಟಡಕ್ಕೆ ಭೇಟಿ ನೀಡಿದಾಗ ಎರಡೂ ಮನೆಗಳನ್ನು ಆಕ್ರಮಿಸಿಕೊಂಡಿರುವುದನ್ನು ಕಂಡುಬಂದಿದೆ. ನಂತರ ಬಾಡಿಗೆದಾರರನ್ನು ವಿಚಾರಿಸಿದಾಗ ಮಾಜಿ ಆಪ್ತ ಸಹಾಯಕ ರವಿಕುಮಾರ್ ವೈದ್ಯನಂತೆ ನಟಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಎರಡು ಫ್ಲಾಟ್‌ಗಳನ್ನು ಬಾಡಿಗೆಗೆ ಪಡೆದಿರುವುದು ಕಂಡುಬಂದಿದೆ. ಗುತ್ತಿಗೆ ಒಪ್ಪಂದವನ್ನು ಪರಿಶೀಲಿಸಿದಾಗ ನಕಲಿ ಸಹಿ ನೋಡಿ ಆಘಾತಕ್ಕೊಳಗಾಗಿದ್ದಾರೆ.  ಬಾಡಿಗೆದಾರರು ಆತನೇ ನಿಜವಾದ ಮಾಲೀಕನೆಂದು ನಂಬಲು ನಿರಾಕರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದಾಗ ನವೀನ್ ಬಂಡೆಪಾಳ್ಯ ಠಾಣೆಗೆ ತೆರಳಿ ರವಿಕುಮಾರ್ ಹಾಗೂ ಬಾಡಿಗೆದಾರರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.

ಆರೋಪಿಯು 2020 ರಿಂದ ಏಪ್ರಿಲ್ 2023 ರವರೆಗೆ ಇಬ್ಬರು ಬಾಡಿಗೆದಾರರಿಗೆ ಮನೆಗಳನ್ನು ಗುತ್ತಿಗೆಗೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ವಿವರಣೆ ಕೋರಿ ಇಬ್ಬರು ಬಾಡಿಗೆದಾರರಿಗೆ ನೊಟೀಸ್ ನೀಡಲಾಗಿದೆ ಎಂದು ತನಿಖೆ ನಡೆಸುತ್ತಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT