ಅಶ್ವತ್ಥನಾರಾಯಣ 
ರಾಜ್ಯ

ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ: ಅಶ್ವತ್ಥ್​​ ನಾರಾಯಣ​​​​ಗೆ ಹೈಕೋರ್ಟ್ ಬಿಗ್ ರಿಲೀಫ್!

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ  ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಬೆಂಗಳೂರು: ಉರಿಗೌಡ-ನಂಜೇಗೌಡರು ಟಿಪ್ಪುವನ್ನು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನೂ ಮುಗಿಸಬೇಕು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ  ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್​​​ಗೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಎಫ್ಐಆರ್ ರದ್ದು ಕೋರಿ ಬಿಜೆಪಿ ಶಾಸಕ ಅಶ್ವತ್ಥ್​​ ನಾರಾಯಣ ಅವರು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇಂದು(ಮೇ,30) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶ್ವತ್ಥ್ ನಾರಾಯಣ ವಿರುದ್ಧ ಎಫ್​ಐಆರ್​ಗೆ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠ ಆದೇಶ ಹೊರಡಿಸಿದೆ.

ಚುನಾವಣೆಯಲ್ಲಿ ಸೋಲಿಸಬೇಕೆಂಬ ರೀತಿಯಲ್ಲಿ ನೀಡಿದ ಹೇಳಿಕೆ ನೀಡಲಾಗಿತ್ತು. ಫೆಬ್ರವರಿ ತಿಂಗಳ ದೂರು ಸಂಬಂಧ ಎನ್​​​ಸಿಆರ್ ದಾಖಲಾಗಿತ್ತು. ಸರ್ಕಾರ ಬದಲಾದ ನಂತರ ಹೊಸ ದೂರು ನೀಡಲಾಗಿದೆ. ರುದ್ದೇಶ ಪೂರ್ವಕವಾಗಿ ಎಫ್ಐಆರ್ ದಾಖಲಿಸಲಾಗಿದೆ. ಮೇಲ್ನೋಟಕ್ಕೆ ಐಪಿಸಿ ಸೆಕ್ಷನ್153 ರಂತೆ ಅಪರಾಧವಾಗುವ ಅಂಶಗಳಿಲ್ಲ ಹೀಗಾಗಿ ಎಫ್​ಐಆರ್​ಗೆ ತಡೆ ನೀಡುವಂತೆ ಅಶ್ವತ್ಥ್ ನರಾಯಣ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವಡಗಿ ವಾದ ಮಂಡಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲ, ಜಾಮೀನು ನೀಡಬಹುದಾದ ಪ್ರಕರಣವಾದ್ದರಿಂದ ತಡೆ ಬೇಡ ಎಂದು ವಾದಿಸಿದರು. ಈ ವಾದ ವಿವಾದ ಆಲಿಸಿದ ನ್ಯಾ.ಎಂ.ನಾಗಪ್ರಸನ್ನ ಅವರ ಪೀಠ ಎಫ್​ಐಆರ್​ಗೆ​ ತಡೆಯಾಜ್ಞೆ ನೀಡಿ ಆದೇಶಿಸಿದೆ.

2023ರ ಫೆ.15ರಂದು ಮಂಡ್ಯದ ಸಾತನೂರಿನ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅಂದು ಸಚಿವರಾಗಿದ್ದ ಅಶ್ವತ್ಥನಾರಾಯಣ ಅವರು, ಟಿಪ್ಪುವನ್ನು ಉರಿಗೌಡ-ನಂಜೇಗೌಡರು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಿ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಮೈಸೂರಿನ ಕೆಪಿಸಿಸಿ ವಕ್ತಾರ ಲಕ್ಷ್ಮಣ್‌ ಅವರು ಫೆ.17ರಂದು ದೂರು ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT