ಸ್ನೇಕ್ ನರೇಶ್ 
ರಾಜ್ಯ

ಚಿಕ್ಕಮಗಳೂರು: ನಾಗರಹಾವು ಕಚ್ಚಿ ಉರಗ ತಜ್ಞ ಸ್ನೇಕ್‌ ನರೇಶ್‌ ಸಾವು!

ಚಿಕ್ಕಮಗಳೂರಿನಲ್ಲಿ ನಾಗರಹಾವು ಕಚ್ಚಿ ಉಗರ ತಜ್ಞ ಸ್ನೇಕ್ ನರೇಶ್ ಮೃತಪಟ್ಟಿದ್ದಾರೆ. ಸ್ನೇಕ್‌ ನರೇಶ್‌ ಅವರು ಸ್ವತಃ ತಾವು ಹಿಡಿದು ಬ್ಯಾಗ್‌ನಲ್ಲಿ ಇಟ್ಟಿದ್ದ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನಾಗರಹಾವು ಕಚ್ಚಿ ಉಗರ ತಜ್ಞ ಸ್ನೇಕ್ ನರೇಶ್ ಮೃತಪಟ್ಟಿದ್ದಾರೆ. ಸ್ನೇಕ್‌ ನರೇಶ್‌ ಅವರು ಸ್ವತಃ ತಾವು ಹಿಡಿದು ಬ್ಯಾಗ್‌ನಲ್ಲಿ ಇಟ್ಟಿದ್ದ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.

ಮೃತ 51 ವರ್ಷದ ಸ್ನೇಹ ನರೇಶ್ ಅವರು ಚಿಕ್ಕಮಗಳೂರಿನಲ್ಲಿ ನೂರಾರು ಹಾವುಗಳನ್ನು ಹಿಡಿದು ಜನರಿಗೆ ಜಾಗೃತಿ ಮೂಡಿಸುತ್ತಿದ್ದರು. ಆದರೆ ದುರ್ವಿಧಿ ಅವರು ಹಿಡಿದು ಬ್ಯಾಗ್ ನಲ್ಲಿಟ್ಟ ಹಾವೇ ಅವರನ್ನು ಕಚ್ಚಿದ್ದು ಸಾವನ್ನಪ್ಪಿದ್ದಾರೆ. 

ನರೇಶ್ ಅವರು ಇಂದು ಬೆಳಗ್ಗೆ ನಾಗರಹಾವೊಂದನ್ನು ರಕ್ಷಣೆ ಮಾಡಿ ತಂದಿದ್ದರು. ನಂತರ ಮತ್ತೊಂದು ಹಾವಿನ ರಕ್ಷಣೆಗೆ ಕರೆ ಬಂದಿದ್ದು, ಈ ವೇಳೆ ಬೈಕಿನ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ ವೇಳೆ ನಾಗರಹಾವು ನರೇಶ್ ಅವರನ್ನು ಕಚ್ಚಿತ್ತು. 

ಹಾವು ಕಚ್ಚಿದ ಪರಿಣಾಮ ನರೇಶ್ ಅವರು ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರು ಅದು ಫಲ ನೀಡಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel