ಸಚಿವ ಚೆಲುವರಾಯಸ್ವಾಮಿ 
ರಾಜ್ಯ

ಕೃಷಿ ಇಲಾಖೆಯಲ್ಲಿ ಶೇ.58ರಷ್ಟು ಖಾಲಿ ಹುದ್ದೆ: ಅಧಿಕಾರಿಗಳಿಂದ ವರದಿ ಕೇಳಿದ ಸಚಿವ ಚೆಲುವರಾಯಸ್ವಾಮಿ

ಕೃಷಿ ಇಲಾಖೆಯಲ್ಲಿ ಮಂಜೂರಾದ 8,292 ಹುದ್ದೆಗಳ ಪೈಕಿ ಶೇ.5195 ಅಂದರೆ ಶೇ.58ರಷ್ಟು ಹುದ್ದೆಗಳು ಖಾಲಿ ಇದ್ದು, ಈ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಮಂಗಳವಾರ ಸೂಚನೆ ನೀಡಿದ್ದಾರೆ.

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಮಂಜೂರಾದ 8,292 ಹುದ್ದೆಗಳ ಪೈಕಿ ಶೇ.5195 ಅಂದರೆ ಶೇ.58ರಷ್ಟು ಹುದ್ದೆಗಳು ಖಾಲಿ ಇದ್ದು, ಈ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಮಂಗಳವಾರ ಸೂಚನೆ ನೀಡಿದ್ದಾರೆ.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಇಲಾಖೆಯಲ್ಲಿ ಶೇ.58ರಷ್ಟು ಹುದ್ದೆಗಳು ಖಾಳಿ ಇದ್ದು, ಇದರಿಂದ ಸರ್ಕಾರದ ಯೋಜನೆಗಳ ವಿತರಣೆಯಲ್ಲಿ ವಿಳಂಬವಾಗುವಂತೆ ಮಾಡಲಿದೆ. ಹೀಗಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ಈ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಮುಂಗಾರು ಪೂರ್ವದಲ್ಲಿ ಬಿತ್ತನೆ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂಗಾರು ಪೂರ್ವದಲ್ಲಿ ಕರ್ನಾಟಕದಲ್ಲಿ 108 ಮಿ.ಮೀ ಮಳೆಯಾಗಬೇಕಿತ್ತು. ಮುಂಗಾರು ಪೂರ್ವದಲ್ಲಿ 2.95 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಿದ್ದು, 2.48 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ. ನಮ್ಮಲ್ಲಿ 7.85 ಲಕ್ಷ ಕ್ವಿಂಟಾಲ್ ದಾಸ್ತಾನು ಇದ್ದು, ಯಾವುದೇ ಕೊರತೆ ಇಲ್ಲ, ಈ ಮುಂಗಾರು ಸಂದರ್ಭದಲ್ಲಿ 82.35 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಿದ್ದೇವೆ.

ಪ್ರಸ್ತುತ 25.47 ಲಕ್ಷ ಟನ್ ರಸಗೊಬ್ಬರಗಳ ಬೇಡಿಕೆಯೂ ಇದ್ದು, ಇಲಾಖೆ ಈಗಾಗಲೇ 7.30 ಲಕ್ಷ ಟನ್ ಪೂರೈಸಿದೆ. ಗೋದಾಮುಗಳಲ್ಲಿ 13.90 ಲಕ್ಷ ಟನ್‌ಗಳಿದ್ದರೆ, ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ 1.68 ಲಕ್ಷ ಟನ್‌ಗಳಷ್ಟು ಬಫರ್‌ ಸ್ಟಾಕ್‌ ಇದೆ. ಹಾಗಾಗಿ ಗೊಬ್ಬರದ ಕೊರತೆ ಇಲ್ಲ.ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಅಧಿಕಾರಿಗಳು ಹಾಜರಿರಬೇಕು, ಮಣ್ಣು ಪರೀಕ್ಷೆ ವರದಿಗಳನ್ನು ಸಕಾಲದಲ್ಲಿ ಸಲ್ಲಿಸಬೇಕು, ಬೆಳೆ ವಿಮೆಯನ್ನು ರೈತರಿಗೆ ತಡೆರಹಿತವಾಗಿಸಬೇಕು ಎಂದು ಸೂಚನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT