ಮಡಿವಾಳ ಕೆರೆ 
ರಾಜ್ಯ

ಮೀನುಗಳು ಮಾರಣಹೋಮ; ಆದರೂ ನಿಂತಿಲ್ಲ ಮಡಿವಾಳ ಕೆರೆಗೆ ಹರಿದು ಬರುತ್ತಿರುವ ಕೊಳಚೆ ನೀರು!

ನಗರದ ದೊಡ್ಡ ಕೆರೆಗಳಲ್ಲಿ ಒಂದಾದ ಮಡಿವಾಳ ಕೆರೆಯಲ್ಲಿ ಕಳೆದ ವಾರ ಮೀನುಗಳ ಮಾರಣಹೋಮವೇ ಕಂಡು ಬಂದಿತ್ತು. ಕಲುಷಿತ ನೀರಿನ ಪರಿಣಾಮ ನೂರಾರು ಮೀನುಗಳು ಸಾವನ್ನಪ್ಪಿದ್ದವು. ಘಟನೆ ಬಳಿಕವೂ ಕೆರೆಗೆ ಹರಿದುಬರುತ್ತಿರುವ ಕೊಳಚೆ ನೀರು ನಿಯಂತ್ರಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ.

ಬೆಂಗಳೂರು: ನಗರದ ದೊಡ್ಡ ಕೆರೆಗಳಲ್ಲಿ ಒಂದಾದ ಮಡಿವಾಳ ಕೆರೆಯಲ್ಲಿ ಕಳೆದ ವಾರ ಮೀನುಗಳ ಮಾರಣಹೋಮವೇ ಕಂಡು ಬಂದಿತ್ತು. ಕಲುಷಿತ ನೀರಿನ ಪರಿಣಾಮ ನೂರಾರು ಮೀನುಗಳು ಸಾವನ್ನಪ್ಪಿದ್ದವು. ಘಟನೆ ಬಳಿಕವೂ ಕೆರೆಗೆ ಹರಿದುಬರುತ್ತಿರುವ ಕೊಳಚೆ ನೀರು ನಿಯಂತ್ರಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ.

ಬಿಬಿಎಂಪಿ ಹಾಗೂ ಬೆಂಗಳೂರು ನಗರದ ವಿಭಾಗದ ಅರಣ್ಯ ಇಲಾಖೆಯ ಈ ನಿರ್ಲಕ್ಷ್ಯದ ವಿರುದ್ಧ ಕೆರೆ ಕಾರ್ಯಕರ್ತರು ವಾಗ್ದಾಳಿ ನಡೆಸಿದ್ದಾರೆ.

ಕೆರೆ ನೀರಿನ ಗುಣಮಟ್ಟ ಹಾಳಾಗಿರುವುದರಿಂದ ಇದು ಮೀನುಗಳ ಮೇಲಷ್ಟೇ ಅಲ್ಲ, ಸೂಕ್ಷ್ಮ ಜೀವಿಗಳ ಮೇಲೂ ಪರಿಣಾಮ ಬೀರುತ್ತಿದೆ. ಕೆರೆಗೆ ಕಾಯಕಲ್ಪ ನೀಡಲು ಕನಿಷ್ಟ ಒಂದು ವರ್ಷವಾದರೂ ಬೇಕು ಎಂದು ಫೆಡರೇಷನ್ ಆಫ್ ಬೆಂಗಳೂರು ಲೇಕ್ಸ್‌ನ ಕಾರ್ಯಕರ್ತ ಮಂಜುನಾಥ್ ಅವರು ಹೇಳಿದ್ದಾರೆ.

ಅಧಿಕಾರಿಗಳ ದುರ್ವರ್ತನೆಗೆ ಹಿಡಿಶಾಪ ಹಾಕಿದ ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರೀಕರು, ಕೆರೆಗೆ ಕೊಳಚೆ ನೀರು ಹರಿದುಬರುವುದನ್ನು ತಡೆಯಲು, ಸ್ವತಃ ಮಳೆನೀರು ಚರಂಡಿಯ ಗೋಡೆಯ ಒಂದು ಭಾಗವನ್ನು ಸರಿಪಡಿಸುವ ಪ್ರಯತ್ನ ಮಾಡಿದ್ದಾರೆ.

ಉಪ ಅರಣ್ಯ ಸಂರಕ್ಷಾಧಿಕಾರಿ ಚಕ್ರಪಾಣಿ ವೈ ಅವರು ಮಾತನಾಡಿ, ಹಾನಿಗೊಳಗಾದ ಗೋಡೆ ಸರಿಪಡಿಸುವಂತೆ ಬಿಬಿಎಂಪಿಗೆ ತಿಳಿಸಲಾಗಿದೆ. ಇದು ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಎಲ್ಲಾ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಹೇಳಿದ್ದಾರೆ.

ಅರಣ್ಯ ಇಲಾಖೆಯು ಕೆರೆಗಳ ಒಳಹರಿವುಗಳನ್ನು ನಿರ್ವಹಿಸುವುದಿಲ್ಲ. ಇದು ಬಿಬಿಎಂಪಿಯ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ರೇಂಜ್ ಫಾರೆಸ್ಟ್ ಆಫೀಸರ್ ಮಾತನಾಡಿ, ಗೋಡೆ ನಿರ್ಮಾಣಕ್ಕೆ ನಾಗರೀಕರು ಸಹಾಯ ಮಾಡಿದ್ದಾರೆ. ಮಾನ್ಸೂನ್ ಆರಂಭವನ್ನು ಪರಿಗಣಿಸಿ ಈಗಾಗಲೇ ಇತರೆ ಕ್ರಮಗಳ ಕೈಗೊಳ್ಳಲಾಗಿದೆ. ಹೆಚ್ಚು ಸಂಖ್ಯೆಯ ಮೀನುಗಳು ಸಾವನ್ನಪ್ಪಿಲ್ಲ. ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT