ಮಡಿವಾಳ ಕೆರೆ 
ರಾಜ್ಯ

ಮೀನುಗಳು ಮಾರಣಹೋಮ; ಆದರೂ ನಿಂತಿಲ್ಲ ಮಡಿವಾಳ ಕೆರೆಗೆ ಹರಿದು ಬರುತ್ತಿರುವ ಕೊಳಚೆ ನೀರು!

ನಗರದ ದೊಡ್ಡ ಕೆರೆಗಳಲ್ಲಿ ಒಂದಾದ ಮಡಿವಾಳ ಕೆರೆಯಲ್ಲಿ ಕಳೆದ ವಾರ ಮೀನುಗಳ ಮಾರಣಹೋಮವೇ ಕಂಡು ಬಂದಿತ್ತು. ಕಲುಷಿತ ನೀರಿನ ಪರಿಣಾಮ ನೂರಾರು ಮೀನುಗಳು ಸಾವನ್ನಪ್ಪಿದ್ದವು. ಘಟನೆ ಬಳಿಕವೂ ಕೆರೆಗೆ ಹರಿದುಬರುತ್ತಿರುವ ಕೊಳಚೆ ನೀರು ನಿಯಂತ್ರಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ.

ಬೆಂಗಳೂರು: ನಗರದ ದೊಡ್ಡ ಕೆರೆಗಳಲ್ಲಿ ಒಂದಾದ ಮಡಿವಾಳ ಕೆರೆಯಲ್ಲಿ ಕಳೆದ ವಾರ ಮೀನುಗಳ ಮಾರಣಹೋಮವೇ ಕಂಡು ಬಂದಿತ್ತು. ಕಲುಷಿತ ನೀರಿನ ಪರಿಣಾಮ ನೂರಾರು ಮೀನುಗಳು ಸಾವನ್ನಪ್ಪಿದ್ದವು. ಘಟನೆ ಬಳಿಕವೂ ಕೆರೆಗೆ ಹರಿದುಬರುತ್ತಿರುವ ಕೊಳಚೆ ನೀರು ನಿಯಂತ್ರಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ.

ಬಿಬಿಎಂಪಿ ಹಾಗೂ ಬೆಂಗಳೂರು ನಗರದ ವಿಭಾಗದ ಅರಣ್ಯ ಇಲಾಖೆಯ ಈ ನಿರ್ಲಕ್ಷ್ಯದ ವಿರುದ್ಧ ಕೆರೆ ಕಾರ್ಯಕರ್ತರು ವಾಗ್ದಾಳಿ ನಡೆಸಿದ್ದಾರೆ.

ಕೆರೆ ನೀರಿನ ಗುಣಮಟ್ಟ ಹಾಳಾಗಿರುವುದರಿಂದ ಇದು ಮೀನುಗಳ ಮೇಲಷ್ಟೇ ಅಲ್ಲ, ಸೂಕ್ಷ್ಮ ಜೀವಿಗಳ ಮೇಲೂ ಪರಿಣಾಮ ಬೀರುತ್ತಿದೆ. ಕೆರೆಗೆ ಕಾಯಕಲ್ಪ ನೀಡಲು ಕನಿಷ್ಟ ಒಂದು ವರ್ಷವಾದರೂ ಬೇಕು ಎಂದು ಫೆಡರೇಷನ್ ಆಫ್ ಬೆಂಗಳೂರು ಲೇಕ್ಸ್‌ನ ಕಾರ್ಯಕರ್ತ ಮಂಜುನಾಥ್ ಅವರು ಹೇಳಿದ್ದಾರೆ.

ಅಧಿಕಾರಿಗಳ ದುರ್ವರ್ತನೆಗೆ ಹಿಡಿಶಾಪ ಹಾಕಿದ ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರೀಕರು, ಕೆರೆಗೆ ಕೊಳಚೆ ನೀರು ಹರಿದುಬರುವುದನ್ನು ತಡೆಯಲು, ಸ್ವತಃ ಮಳೆನೀರು ಚರಂಡಿಯ ಗೋಡೆಯ ಒಂದು ಭಾಗವನ್ನು ಸರಿಪಡಿಸುವ ಪ್ರಯತ್ನ ಮಾಡಿದ್ದಾರೆ.

ಉಪ ಅರಣ್ಯ ಸಂರಕ್ಷಾಧಿಕಾರಿ ಚಕ್ರಪಾಣಿ ವೈ ಅವರು ಮಾತನಾಡಿ, ಹಾನಿಗೊಳಗಾದ ಗೋಡೆ ಸರಿಪಡಿಸುವಂತೆ ಬಿಬಿಎಂಪಿಗೆ ತಿಳಿಸಲಾಗಿದೆ. ಇದು ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಎಲ್ಲಾ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಹೇಳಿದ್ದಾರೆ.

ಅರಣ್ಯ ಇಲಾಖೆಯು ಕೆರೆಗಳ ಒಳಹರಿವುಗಳನ್ನು ನಿರ್ವಹಿಸುವುದಿಲ್ಲ. ಇದು ಬಿಬಿಎಂಪಿಯ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ರೇಂಜ್ ಫಾರೆಸ್ಟ್ ಆಫೀಸರ್ ಮಾತನಾಡಿ, ಗೋಡೆ ನಿರ್ಮಾಣಕ್ಕೆ ನಾಗರೀಕರು ಸಹಾಯ ಮಾಡಿದ್ದಾರೆ. ಮಾನ್ಸೂನ್ ಆರಂಭವನ್ನು ಪರಿಗಣಿಸಿ ಈಗಾಗಲೇ ಇತರೆ ಕ್ರಮಗಳ ಕೈಗೊಳ್ಳಲಾಗಿದೆ. ಹೆಚ್ಚು ಸಂಖ್ಯೆಯ ಮೀನುಗಳು ಸಾವನ್ನಪ್ಪಿಲ್ಲ. ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT