ಸಂಗ್ರಹ ಚಿತ್ರ 
ರಾಜ್ಯ

ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ವಿರೋಧಿಸಿ ಪ್ರತಿಭಟನೆ: 70 ಮಂದಿ ವಿರುದ್ಧದ ಪ್ರಕರಣ ರದ್ದು!

ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ನಿರ್ಮಾಣ ಕುರಿತು ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಿದ್ದ 70 ಮಂದಿ ನಾಗರೀಕರು ಹಾಗೂ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

ಬೆಂಗಳೂರು: ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ನಿರ್ಮಾಣ ಕುರಿತು ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಿದ್ದ 70 ಮಂದಿ ನಾಗರೀಕರು ಹಾಗೂ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರಂತೆ 70 ಮಂದಿಯ ಪೈಕಿ ಅವಿಜಿತ್ ಮೈಕೆಲ್ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು 70 ಮಂದಿ ವಿರುದ್ಧ ಪ್ರಕರಣ ಕೈಬಿಡುವಂತೆ ಆದೇಶಿಸಿದೆ.

ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು ಮಂಗಳವಾರ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ಹೈಕೋರ್ಟ್ ನಮ್ಮ ಸಾಂವಿಧಾನಿಕ ಹಕ್ಕನ್ನು ಎತ್ತಿಹಿಡಿಯುತ್ತದೆ ಎಂಬುದರಲ್ಲಿ ಯಾವುದೇ ಸಂಶಯಗಳಿಲ್ಲ. ಇದು ಸಕ್ರಿಯ ನಾಗರಿಕರು ಮತ್ತು ಪ್ರಜಾಪ್ರಭುತ್ವಕ್ಕೆ ಸಂದ ಜಯವಾಗಿದೆ ಎಂದು ಅವಿಜಿತ್ ಅವರು ಹೇಳಿದ್ದಾರೆ.

ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ನಿರ್ಮಾಣ ಕುರಿತು ಸ್ಯಾಂಕಿ ಟ್ಯಾಂಕ್ ಬಳಿ ಕಪ್ಪು ಪಟ್ಟಿ ಕಟ್ಟಿಕೊಂಡು ನಾಗರೀಕರು ಮೌನ ಮೆರವಣಿಗೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಫೆಬ್ರವರಿ 19, 2023 ರಂದು ಸದಾಶಿವನಗರ ಪೊಲೀಸರು 70 ಮಂದಿ ಪ್ರತಿಭಟನಾಕಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದ್ದರು.

ಕಾರ್ಯಕರ್ತರು, ನಾಗರಿಕ ಗುಂಪುಗಳು ಮತ್ತು ರಾಜಕೀಯ ಪಕ್ಷಗಳ ವಿರೋಧದ ನಂತರ, ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆಗಾಗಿ ಹಲಸೂರು ಗೇಟ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ರದ್ದುಗೊಳಿಸುತ್ತದೆ ಎಂಬ ವಿಶ್ವಾಸ ನಮಗಿದೆ. ಪ್ರತಿಭಟನೆ ನಡೆಸುವಾಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಯೋಜನೆ ಅವೈಜ್ಞಾನಿಕವಾಗಿದೆ ಎಂದು ಹೇಳಿ, ನಮ್ಮ ಪ್ರತಿಭಟನೆಗೆ ಬೆಂಬಲ ನೀಡಿತ್ತು ಎಂದು ಟಿಜನ್ಸ್ ಫಾರ್ ಸ್ಯಾಂಕಿ ಸದಸ್ಯೆ ಕಿಮ್ಸುಕಾ ಅಯ್ಯರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT