ಸಂಗ್ರಹ ಚಿತ್ರ 
ರಾಜ್ಯ

ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ವಿರೋಧಿಸಿ ಪ್ರತಿಭಟನೆ: 70 ಮಂದಿ ವಿರುದ್ಧದ ಪ್ರಕರಣ ರದ್ದು!

ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ನಿರ್ಮಾಣ ಕುರಿತು ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಿದ್ದ 70 ಮಂದಿ ನಾಗರೀಕರು ಹಾಗೂ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

ಬೆಂಗಳೂರು: ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ನಿರ್ಮಾಣ ಕುರಿತು ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಿದ್ದ 70 ಮಂದಿ ನಾಗರೀಕರು ಹಾಗೂ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರಂತೆ 70 ಮಂದಿಯ ಪೈಕಿ ಅವಿಜಿತ್ ಮೈಕೆಲ್ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು 70 ಮಂದಿ ವಿರುದ್ಧ ಪ್ರಕರಣ ಕೈಬಿಡುವಂತೆ ಆದೇಶಿಸಿದೆ.

ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು ಮಂಗಳವಾರ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ಹೈಕೋರ್ಟ್ ನಮ್ಮ ಸಾಂವಿಧಾನಿಕ ಹಕ್ಕನ್ನು ಎತ್ತಿಹಿಡಿಯುತ್ತದೆ ಎಂಬುದರಲ್ಲಿ ಯಾವುದೇ ಸಂಶಯಗಳಿಲ್ಲ. ಇದು ಸಕ್ರಿಯ ನಾಗರಿಕರು ಮತ್ತು ಪ್ರಜಾಪ್ರಭುತ್ವಕ್ಕೆ ಸಂದ ಜಯವಾಗಿದೆ ಎಂದು ಅವಿಜಿತ್ ಅವರು ಹೇಳಿದ್ದಾರೆ.

ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ನಿರ್ಮಾಣ ಕುರಿತು ಸ್ಯಾಂಕಿ ಟ್ಯಾಂಕ್ ಬಳಿ ಕಪ್ಪು ಪಟ್ಟಿ ಕಟ್ಟಿಕೊಂಡು ನಾಗರೀಕರು ಮೌನ ಮೆರವಣಿಗೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಫೆಬ್ರವರಿ 19, 2023 ರಂದು ಸದಾಶಿವನಗರ ಪೊಲೀಸರು 70 ಮಂದಿ ಪ್ರತಿಭಟನಾಕಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದ್ದರು.

ಕಾರ್ಯಕರ್ತರು, ನಾಗರಿಕ ಗುಂಪುಗಳು ಮತ್ತು ರಾಜಕೀಯ ಪಕ್ಷಗಳ ವಿರೋಧದ ನಂತರ, ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆಗಾಗಿ ಹಲಸೂರು ಗೇಟ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ರದ್ದುಗೊಳಿಸುತ್ತದೆ ಎಂಬ ವಿಶ್ವಾಸ ನಮಗಿದೆ. ಪ್ರತಿಭಟನೆ ನಡೆಸುವಾಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಯೋಜನೆ ಅವೈಜ್ಞಾನಿಕವಾಗಿದೆ ಎಂದು ಹೇಳಿ, ನಮ್ಮ ಪ್ರತಿಭಟನೆಗೆ ಬೆಂಬಲ ನೀಡಿತ್ತು ಎಂದು ಟಿಜನ್ಸ್ ಫಾರ್ ಸ್ಯಾಂಕಿ ಸದಸ್ಯೆ ಕಿಮ್ಸುಕಾ ಅಯ್ಯರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT