ಸಂಗ್ರಹ ಚಿತ್ರ 
ರಾಜ್ಯ

ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ವಿರೋಧಿಸಿ ಪ್ರತಿಭಟನೆ: 70 ಮಂದಿ ವಿರುದ್ಧದ ಪ್ರಕರಣ ರದ್ದು!

ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ನಿರ್ಮಾಣ ಕುರಿತು ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಿದ್ದ 70 ಮಂದಿ ನಾಗರೀಕರು ಹಾಗೂ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

ಬೆಂಗಳೂರು: ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ನಿರ್ಮಾಣ ಕುರಿತು ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಿದ್ದ 70 ಮಂದಿ ನಾಗರೀಕರು ಹಾಗೂ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರಂತೆ 70 ಮಂದಿಯ ಪೈಕಿ ಅವಿಜಿತ್ ಮೈಕೆಲ್ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು 70 ಮಂದಿ ವಿರುದ್ಧ ಪ್ರಕರಣ ಕೈಬಿಡುವಂತೆ ಆದೇಶಿಸಿದೆ.

ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು ಮಂಗಳವಾರ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ಹೈಕೋರ್ಟ್ ನಮ್ಮ ಸಾಂವಿಧಾನಿಕ ಹಕ್ಕನ್ನು ಎತ್ತಿಹಿಡಿಯುತ್ತದೆ ಎಂಬುದರಲ್ಲಿ ಯಾವುದೇ ಸಂಶಯಗಳಿಲ್ಲ. ಇದು ಸಕ್ರಿಯ ನಾಗರಿಕರು ಮತ್ತು ಪ್ರಜಾಪ್ರಭುತ್ವಕ್ಕೆ ಸಂದ ಜಯವಾಗಿದೆ ಎಂದು ಅವಿಜಿತ್ ಅವರು ಹೇಳಿದ್ದಾರೆ.

ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ನಿರ್ಮಾಣ ಕುರಿತು ಸ್ಯಾಂಕಿ ಟ್ಯಾಂಕ್ ಬಳಿ ಕಪ್ಪು ಪಟ್ಟಿ ಕಟ್ಟಿಕೊಂಡು ನಾಗರೀಕರು ಮೌನ ಮೆರವಣಿಗೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಫೆಬ್ರವರಿ 19, 2023 ರಂದು ಸದಾಶಿವನಗರ ಪೊಲೀಸರು 70 ಮಂದಿ ಪ್ರತಿಭಟನಾಕಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದ್ದರು.

ಕಾರ್ಯಕರ್ತರು, ನಾಗರಿಕ ಗುಂಪುಗಳು ಮತ್ತು ರಾಜಕೀಯ ಪಕ್ಷಗಳ ವಿರೋಧದ ನಂತರ, ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆಗಾಗಿ ಹಲಸೂರು ಗೇಟ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ರದ್ದುಗೊಳಿಸುತ್ತದೆ ಎಂಬ ವಿಶ್ವಾಸ ನಮಗಿದೆ. ಪ್ರತಿಭಟನೆ ನಡೆಸುವಾಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಯೋಜನೆ ಅವೈಜ್ಞಾನಿಕವಾಗಿದೆ ಎಂದು ಹೇಳಿ, ನಮ್ಮ ಪ್ರತಿಭಟನೆಗೆ ಬೆಂಬಲ ನೀಡಿತ್ತು ಎಂದು ಟಿಜನ್ಸ್ ಫಾರ್ ಸ್ಯಾಂಕಿ ಸದಸ್ಯೆ ಕಿಮ್ಸುಕಾ ಅಯ್ಯರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT