ಸಿಎಂ ಸಿದ್ದರಾಮಯ್ಯ 
ರಾಜ್ಯ

ಹಣಕಾಸು ಇಲಾಖೆ ವಿರೋಧ?: ಸಂಪುಟ ಸಭೆ ಜೂನ್ 2ಕ್ಕೆ ಮುಂದೂಡಿಕೆ: ಗ್ಯಾರೆಂಟಿ ಯೋಜನೆ ಜಾರಿ ಖಚಿತ ಎಂದ ಸಿಎಂ ಸಿದ್ಧರಾಮಯ್ಯ

ಐದು ಗ್ಯಾರೆಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಬೆಂಗಳೂರು: ಐದು ಗ್ಯಾರೆಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಐದು ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿಗಳು ಅತ್ಯಂತ ಮಹತ್ವದ ಸಭೆಯನ್ನು ನಡೆಸಿದರು. ನಂತರ ಮಾತನಾಡಿದ ಅವರು, ಐದು ಗ್ಯಾರೆಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರೆಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಗುರುವಾರ ನಿಗದಿ ಪಡಿಸಲಾಗಿದ್ದ ಸಚಿವ ಸಂಪುಟ ಶುಕ್ರವಾರವಾರಕ್ಕೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ನಡೆಯಲಿದೆ. ಐದು ಗ್ಯಾರಂಟಿಗಳ ಜಾರಿ ಸಂಬಂಧ ಮತ್ತಷ್ಟು ತಯಾರಿ ಅಗತ್ಯ ಹಿನ್ನೆಲೆ ನಾಳೆಯೂ ಕೂಡ ಅಧಿಕಾರಿಗಳು, ಸಚಿವರು ಪ್ರತ್ಯೇಕ ಸಭೆ ನಡೆಸಲಿದ್ದಾರೆ.

ಎಲ್ಲಾ ಗ್ಯಾರೆಂಟಿಗಳ ಜಾರಿಗೆ ಹಣಕಾಸು ಹೊಂದಿಸುವುದು ಕಷ್ಟ ಎಂದು ಹಣಕಾಸು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಒಂದು ದಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT