ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಪರಿಶೀಲನೆ 
ರಾಜ್ಯ

ಭ್ರಷ್ಟ ಅಧಿಕಾರಿಗಳ ಬೇಟೆ: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ; ಮನೆ, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ

ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ರಾಜ್ಯದಲ್ಲಿ ಮುಂದುವರಿದಿದೆ. ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಇತ್ತ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿಮಾಡಿದ್ದಾರೆ. 

ಬೆಂಗಳೂರು:  ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ರಾಜ್ಯದಲ್ಲಿ ಮುಂದುವರಿದಿದೆ. ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಇತ್ತ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿಮಾಡಿದ್ದಾರೆ. 

ಇಂದು ಬೆಳಗ್ಗೆ ಬೆಂಗಳೂರು, ತುಮಕೂರು ಹಾಗೂ ಹಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ದಾಳಿ ನಡೆದಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತರ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಎಲ್ಲೆಲ್ಲಿ, ಯಾರ ನಿವಾಸ ಮೇಲೆ ದಾಳಿ?: ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ಲೋಕಾಯುಕ್ತ ಡಿಎಸ್ ಪಿಗಳಾದ ಮಂಜುನಾಥ್ ಹಾಗೂ ಹರೀಶ್ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದೆ.

ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ: ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೇಟ್ಟರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಣೆಬೆನ್ನೂರು ನಗರದ ನಿವಾಸ ಹಾಗೂ ಹಾವೇರಿಯ ದೇವಗರಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಎರಡು ಕಡೆ ಲೋಕಾಯುಕ್ತ ದಾಳಿ: ಬೆಂಗಳೂರಿನ ಎರಡು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದಾರೆ. ನಗರದ ಬಸವೇಶ್ವರನಗರದಲ್ಲಿರುವ ಬೆಸ್ಕಾಂ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಮೇಲೆ ದಾಳಿಯಾಗಿದೆ. ಇನ್ನು ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದ, ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಕಾರ್ಯಾಚರಣೆ: ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸದ ಮೇಲೆ ದಾಳಿಯಾಗಿದೆ. ತೋಟದ ಮನೆ ಸೇರಿ ಹಲವು ಕಡೆ ಒಟ್ಟು 13 ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ಮಾಡಿ‌ ಕಾರ್ಯಾಚರಣೆ ನಡೆಸಿದೆ.

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮೇಲೆ ದಾಳಿ: ಬೀದರ್ ಭೂಸೇನಾ ನಿಗಮದ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಡಿವೈಎಸ್ಪಿ ಓಲೆಕಾರ ನೇತೃತ್ವದಲ್ಲಿ ದಾಳಿ ದಾಳಿಯಾಗಿದೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ನಲ್ಲೂ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT