ಸುನೀಲ್ ಕನುಗೋಲು 
ರಾಜ್ಯ

ಸಿಎಂ ಸಿದ್ದರಾಮಯ್ಯ ಸಲಹೆಗಾರರಾಗಿ ಸುನೀಲ್ ಕನುಗೋಲು ನೇಮಕ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ಕಾಂಗ್ರೆಸ್‌ನ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ಅವರನ್ನು ನೇಮಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ಕಾಂಗ್ರೆಸ್‌ನ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ಅವರನ್ನು ನೇಮಿಸಲಾಗಿದೆ ಎಂದು ತಿಳಿದುಬಂದಿದೆ.

ಸಂಪುಟ ದರ್ಜೆ ಸ್ಥಾನಮಾನ ನೀಡಿ ಸುನೀಲ್ ಕನುಗೋಲು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ನೇಮಿಸಲಾಗಿದೆ. ಶೀಘ್ರ ಈ ಕುರಿತ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಕನುಗೋಲು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. ಅವರು ಬಿಜೆಪಿ ಸರ್ಕಾರದ ವಿರುದ್ಧ ನಿರೂಪಣೆಗಳನ್ನು ಹೊಂದಿಸಲು ಪಕ್ಷಕ್ಕೆ ಸಹಾಯ ಮಾಡಿದ್ದರು ಮತ್ತು ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಮಹತ್ವದ ಮಾಹಿತಿಗಳನ್ನು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

2024ರ ಲೋಕಸಭೆ ಚುನಾವಣೆಗೆ ಅವರ ನೆರವು ಪಡೆಯಲು ಪಕ್ಷದ ರಾಜ್ಯ ಘಟಕ ನಿರ್ಧರಿಸಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನು ಎದುರಿಸಿ ಕೇವಲ ಒಂದು ಸ್ಥಾನವನ್ನು ಗೆದ್ದಿತ್ತು. ವಿಧಾನಸಭೆ ಚುನಾವಣೆಯಲ್ಲಿ ಅಮೋಘ ಸಾಧನೆ ಮಾಡಿದ ನಂತರ ರಾಜ್ಯದಲ್ಲಿ ಗೆಲುವಿನ ಗತಿಯನ್ನು ಕಾಯ್ದುಕೊಳ್ಳಲು ಕಾಂಗ್ರೆಸ್ ಉತ್ಸುಕವಾಗಿದೆ.

ಬಳ್ಳಾರಿ ಮೂಲದ ಕನುಗೋಲು ಕಾಂಗ್ರೆಸ್ ಪಕ್ಷದ ಮುಖ್ಯ ಚುನಾವಣಾ ತಂತ್ರಗಾರ ಎಂದು ಗುರುತಿಸಲ್ಪಟ್ಟಿದ್ದರು. ಕನುಗೋಲು ಅವರನ್ನು ಸಿಎಂ ಸಲಹೆಗಾರರನ್ನಾಗಿ ನೇಮಿಸಿರುವುದು ಕೂಡ ಆ ಪ್ರಯತ್ನದ ಭಾಗವೇ ಎನ್ನಲಾಗುತ್ತಿದೆ.

ಸುನಿಲ್ ಕನುಗೋಲು ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಿಸಿರುವುದಕ್ಕೆ ಪಕ್ಷದ ಯಶಸ್ಸಿನಲ್ಲಿ ಅವರ ಪಾತ್ರದ ಮಹತ್ವ ಮತ್ತು ರಾಜಕೀಯ ತಂತ್ರಗಾರಿಕೆಯಲ್ಲಿ ಅವರ ಪರಿಣತಿಯನ್ನು ಸೂಚಿಸುತ್ತದೆ. ಪರಿಣಾಮಕಾರಿ ನಿರ್ಧಾರ ಮತ್ತು ಆಡಳಿತವನ್ನು ಮಾಡಲು ಮುಖ್ಯ ಸಲಹೆಗಾರರಾಗಿ, ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT