ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರಿಂದ ಕರಾಳ ದಿನ ಆಚರಣೆ 
ರಾಜ್ಯ

ಬೆಳಗಾವಿ: ಕನ್ನಡಿಗರಿಂದ ರಾಜ್ಯೋತ್ಸವ ಸಂಭ್ರಮಾಚರಣೆಯಾದರೆ ಎಂಇಎಸ್ ನಿಂದ ಕರಾಳ ದಿನ ಆಚರಣೆ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದು ನವೆಂಬರ್ 1 ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದರೆ ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಎಂಇಎಸ್(Maharashtra Ekikarana Samiti) ಸಂಘಟನೆ ಕರಾಳ ದಿನ ಆಚರಿಸುತ್ತಿದೆ. ಬೆಳಗಾವಿಯ ಸಂಭಾಜಿ ಉದ್ಯಾನದಿಂದ ಮೆರವಣಿಗೆ ಆರಂಭವಾಗಿದೆ. ಕಪ್ಪು ಬಟ್ಟೆ ಧರಸಿ ನೂರಾರು ಜನ ಎಂಇಎಸ್ ಪುಂಡರು ಮೆರವಣಿಗೆಯಲ್ಲಿ ಭಾಗಿಯಾಗಿ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದು ನವೆಂಬರ್ 1 ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದರೆ ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಎಂಇಎಸ್(Maharashtra Ekikarana Samiti) ಸಂಘಟನೆ ಕರಾಳ ದಿನ ಆಚರಿಸುತ್ತಿದೆ.
ಬೆಳಗಾವಿಯ ಸಂಭಾಜಿ ಉದ್ಯಾನದಿಂದ ಮೆರವಣಿಗೆ ಆರಂಭವಾಗಿದೆ. ಕಪ್ಪು ಬಟ್ಟೆ ಧರಸಿ ನೂರಾರು ಜನ ಎಂಇಎಸ್ ಪುಂಡರು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ನಾಡದ್ರೋಹಿ ಘೋಷಣೆ ಕೂಗುತ್ತಿದ್ದಾರೆ. ಭಾರಿ ಪೊಲೀಸ್ ಬಂದೋಬಸ್ತ್ ನಲ್ಲಿ ಎಂಇಎಸ್ ಮೆರವಣಿಗೆ ನಡೆಯುತ್ತಿದೆ. ಆದರೆ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. 

ಎಂಇಎಸ್ ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಿಸಿತ್ತು. ನಿಷೇಧದ ನಡುವೆಯೂ ಪೊಲೀಸ್ ಭದ್ರತೆಯಲ್ಲಿ ಕರಾಳ ದಿನ ಆಚರಿಸಲಾಗುತ್ತಿದೆ. ಕರಾಳ ದಿನಾಚರಣೆ ಮಾಡಲು ಬಿಡುವುದಿಲ್ಲ ಎಂದ ಪೊಲೀಸರೇ ಭದ್ರತೆ ನೀಡಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ನಾಡದ್ರೋಹಿ ಘೋಷಣೆ ಕೂಗಿ ಎಂಇಎಸ್ ಪುಂಡಾಟ ಮೆರೆಯುತ್ತಿದೆ. ಬೆಳಗಾವಿ, ಕಾರವಾರ, ನಿಪ್ಪಾಣಿ ಸಂಯುಕ್ತ ಮಹಾರಾಷ್ಟ್ರ ಆಗಲೇಬೇಕು ಅಂತಾ ಘೋಷಣೆ ಕೂಗಲಾಗುತ್ತಿದೆ. ಅನುಮತಿ ನೀಡುವುದಿಲ್ಲ ಎಂದಿದ್ದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನಾಡದ್ರೋಹಿಗಳಿಗೆ ರಕ್ಷಣ ನೀಡಿ ಕೈ ಕಟ್ಟಿ ಕುಳಿತಿದೆ.

ಕರಾಳ ದಿನಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದ ಡಿಸಿ ಮತ್ತು ಕಮಿಷನರ್, ಈಗ ಎಂಇಎಸ್ ಪುಂಡರಿಗೆ ಭದ್ರತೆ ನೀಡಿ ಮೆರವಣಿಗೆಗೆ ಅವಕಾಶ ಕೊಟ್ಟಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಇಬ್ಬಗೆಯ ನೀತಿಗೆ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ. ಕನ್ನಡದ ನೆಲದಲ್ಲಿದ್ರೂ ನಾಡದ್ರೋಹಿ ಘೋಷಣೆ ಕೂಗಿ ಎಂಇಎಸ್ ಪುಂಡಾಟ ಮೆರೆಯುತ್ತಿದೆ. ಇದಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಪರೋಕ್ಷವಾಗಿ ಸಪೋರ್ಟ್ ಮಾಡುತ್ತಿದ್ದು ರಾಜಕೀಯ ಒತ್ತಡಕ್ಕೆ ಮಣಿದು ಸುಮ್ಮನಾದ್ರಾ ಎಂಬ ಮಾತುಗಳು ಕೇಳಿ ಬರುತ್ತಿವೆ. ಕರಾಳ ದಿನಾಚರಣೆ ಬಂದ್ ಮಾಡುವ ಪವರ್ ಇದ್ರೂ ಪೊಲೀಸ್ ಇಲಾಖೆ ಸೈಲೆಂಟ್ ಆಗಿದೆ ಎಂದು ಕನ್ನಡಿಗರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೆಶೆಲ್ಸ್‌ನಿಂದ ಪ್ರಧಾನಿ ಮೋದಿಗೆ 'ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್' ಗೌರವ: ಹಿಂದೂ ಮಹಾಸಾಗರ ಅವಕಾಶಗಳ ಆಗರ

ರಾಮ ಮಂದಿರ ದೇಣಿಗೆ ದುರುಪಯೋಗ ಕೇಸ್: ಆರೋಪಿಗಳ ಪರ ವಾದಿಸಲು ವಕೀಲರ ಹಿಂದೇಟು; ಬುಲ್ಡೋಜರ್ ಕ್ರಮಕ್ಕೆ ಆಗ್ರಹ!

India vs Ireland 2nd t20: ಭಾರತಕ್ಕೆ ಸೋಲು; 1 ರನ್ ನಿಂದ ಗೆದ್ದ ಐರ್ಲೆಂಡ್ ಗೆ ಸರಣಿ!

ಲೋಹದ ಹಕ್ಕಿಗಳ ಪ್ರತ್ಯೇಕ ಅಪಘಾತ: ಸೌದಿ 14 ಹಾಗೂ ಫ್ರಾನ್ಸ್‌ನಲ್ಲಿ 11 ಸೇರಿ 25 ಮಂದಿ ದುರ್ಮರಣ

ಟೆಸ್ಟ್ ಪಂದ್ಯದ ಮಧ್ಯೆ ಬೆನ್ ಸ್ಟೋಕ್ಸ್ ಹಠಾತ್ ನಿವೃತ್ತಿ ಘೋಷಿಸಿ, ಕ್ರಿಕೆಟ್‌ಗೆ ವಿದಾಯ!