ಪ್ರಧಾನಿ ಮೋದಿ 
ರಾಜ್ಯ

ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ: ಪ್ರಧಾನಿ ಮೋದಿ

68ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕರ್ನಾಟಕದ ಸಮಸ್ತ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ.

ನವದೆಹಲಿ/ಬೆಂಗಳೂರು: 68ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕರ್ನಾಟಕದ ಸಮಸ್ತ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಹೇಳಿದ್ದಾರೆ.

ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ 1956ರ ನವೆಂಬರ್ 1ರಂದು ಮೈಸೂರು ರಾಜ್ಯವೆಂದು ಘೋಷಣೆ ಮಾಡಲಾಯಿತು.

ಮೈಸೂರು ರಾಜ್ಯ ನಿರ್ಮಾಣವಾದುದರ ಸಂಕೇತವಾಗಿ ಪ್ರತಿ ವರ್ಷ ನವೆಂಬರ್​ 1 ರಂದು ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ವಿಶ್ವದಾದ್ಯಂತ ನೆಲಸಿರುವ ಕನ್ನಡಿಗರು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಾರೆ.

ಈ ದಿನದಂದು ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪುಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.

ನವೆಂಬರ್ 1, 1973 ರಂದು ಮೈಸೂರು ರಾಜ್ಯಕ್ಕೆ "ಕರ್ನಾಟಕ" ಎಂದು ನಾಮಕರಣ ಮಾಡಲಾಯಿತು. ಈ ವರ್ಷ ಕರ್ನಾಟಕವೆಂದು ನಾಮಕರಣ ಮಾಡಿ 50 ವರ್ಷವಾದ ಹಿನ್ನೆಲೆಯಲ್ಲಿ ಕರ್ನಾಟಕ-50 ಎಂಬ ಶಿರ್ಷಿಕೆ ಅಡಿಯಲ್ಲಿ ಸರ್ಕಾರ ವಿಶೇಷವಾಗಿ ರಾಜ್ಯೋತ್ಸವ ಆಚರಿಸಲು ನಿರ್ಧರಿಸಿದೆ. ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ