ಸಾಂದರ್ಭಿಕ ಚಿತ್ರ 
ರಾಜ್ಯ

Kaveri portal Scam: ಸರ್ಕಾರದ ಕಾವೇರಿ ಪೋರ್ಟಲ್ ಬಳಸಿ ವಂಚನೆ: ಇಬ್ಬರ ಬಂಧನ

ಕರ್ನಾಟಕ ಸರ್ಕಾರದ ಕಾವೇರಿ ಪೋರ್ಟಲ್ ಬಳಸಿ ವಂಚನೆ ಮಾಡಿದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಸರ್ಕಾರದ ಕಾವೇರಿ ಪೋರ್ಟಲ್ ಬಳಸಿ ವಂಚನೆ ಮಾಡಿದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸೈಬರ್ ಅಪರಾಧಿಗಳು ಜನರನ್ನು ವಂಚಿಸಲು ಹೊಸ ಮಾರ್ಗಗಳನ್ನು ಬಳಸುತ್ತಿದ್ದು, ಇದೀಗ ತಮ್ಮ ವಂಚನೆಗೆ ನೇರವಾಗಿ ಸರ್ಕಾರದ ಪೋರ್ಟಲ್ ಅನ್ನೇ ವಂಚಕರು ಬಳಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚಿನ ಪ್ರಕರಣದಲ್ಲಿ, ಆರೋಪಿಗಳು ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಕಾವೇರಿ 2.0 ಪೋರ್ಟಲ್‌ನಿಂದ ಭೂ ದಾಖಲೆಗಳನ್ನು ಡೌನ್‌ಲೋಡ್ ಮಾಡಿಕೊಂಡಿದ್ದು, ಅದರಲ್ಲಿನ ಬಯೋಮೆಟ್ರಿಕ್ಸ್ ಮತ್ತು ಆಧಾರ್ ಕಾರ್ಡ್ ಸಂಖ್ಯೆಯನ್ನು ಬಳಸಿಕೊಂಡು ಜನರನ್ನು ವಂಚಿಸಿದ್ದಾರೆ ಎನ್ನಲಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ನಗರದಲ್ಲಿ ಇಂತಹ 116 ಪ್ರಕರಣಗಳು ವರದಿಯಾಗಿದ್ದು, ಈ ಸಂಬಂಧ ಯಲಹಂಕ ಸಿಇಎನ್ ಪೊಲೀಸರು ಬಿಹಾರ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು 1.5 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ದೀಪಕ್ ಕುಮಾರ್ (33) ಮತ್ತು ನಿವೇದಿತ್ ಕುಮಾರ್ (26) ಎಂದು ಗುರುತಿಸಲಾಗಿದೆ.

ವಂಚನೆ ಕುರಿತು ಹಲವಾರು ದೂರುಗಳನ್ನು ಸ್ವೀಕರಿಸಿದ ನಂತರ, ಪೊಲೀಸ್ ತಂಡವು ಭೂ ದಾಖಲೆಗಳನ್ನು ಡೌನ್‌ಲೋಡ್ ಮಾಡಿದ ವ್ಯಕ್ತಿಗಳ ವಿವರಗಳಿಗಾಗಿ ಸಬ್ ರಿಜಿಸ್ಟ್ರಾರ್ ಕಚೇರಿಯನ್ನು ಸಂಪರ್ಕಿಸಿತು. ಈ ಹುಡುಕಾಟದಲ್ಲಿ ಬಿಹಾರ ಮೂಲದ ಇಬ್ಬರು ಆರೋಪಿಗಳು ಪತ್ತೆಯಾಗಿದ್ದಾರೆ. ಭೂ ದಾಖಲೆಗಳಿಂದ ಬಯೋಮೆಟ್ರಿಕ್ಸ್ ಮತ್ತು ಆಧಾರ್ ಕಾರ್ಡ್ ಸಂಖ್ಯೆಗಳನ್ನು ಬಳಸಿಕೊಂಡು ಆರೋಪಿಗಳು ಆಧಾರ್ ಎನೇಬಲ್ಡ್ ಪಾವತಿ ಸೇವೆಗಳ (ಎಇಪಿಎಸ್) ಮೂಲಕ ಹಣವನ್ನು ಹಿಂಪಡೆದಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಇದರ ನಂತರ, ಆನ್‌ಲೈನ್ ದಾಖಲೆಗಳಿಂದ ಬಯೋಮೆಟ್ರಿಕ್ಸ್ ಮತ್ತು ಆಧಾರ್ ಕಾರ್ಡ್ ಸಂಖ್ಯೆಗಳನ್ನು ಮರೆಮಾಚಲು ಪೊಲೀಸರು ಇನ್‌ಸ್ಪೆಕ್ಟರ್-ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಸ್ಟಾಂಪ್‌ಗಳ ಆಯುಕ್ತರ ಕಚೇರಿಯನ್ನು ಸಂಪರ್ಕಿಸಿದರು. ಇಂತಹ ಬಯೋಮೆಟ್ರಿಕ್ ಮತ್ತು ಆಧಾರ್ ಕಾರ್ಡ್ ವಿವರಗಳೊಂದಿಗೆ ಸಂತ್ರಸ್ತರ ಗಮನಕ್ಕೆ ಬಾರದೆ ಹಣ ಹಿಂಪಡೆಯಬಹುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸುದ್ದಿಗಾರರಿಗೆ ತಿಳಿಸಿದರು.

ಕಾವೇರಿ ಪೋರ್ಟಲ್ ನ ತಾಂತ್ರಿಕ ವೈಶಿಷ್ಟ್ಯಗಳ ದುರ್ಬಳಕೆ
“ಮೈಕ್ರೋ ಎಟಿಎಂಗಳಿಂದ ಹಣವನ್ನು ಹಿಂಪಡೆಯಬಹುದು. OTP ಅಥವಾ ಇತರ ಒಪ್ಪಿಗೆಯ ಅಗತ್ಯವಿಲ್ಲದ ಕಾರಣ ಹಿಂಪಡೆಯುವಿಕೆಯು ಸಂತ್ರಸ್ತರ ಗಮನಕ್ಕೆ ಬರುವುದಿಲ್ಲ. ಬಯೋಮೆಟ್ರಿಕ್ಸ್ ಮತ್ತು ಆಧಾರ್ ಕಾರ್ಡ್ ವಿವರಗಳನ್ನು ಬಳಸಿಕೊಂಡು ರೂ 10,000 ಮೊತ್ತವನ್ನು ಹಿಂಪಡೆಯಬಹುದು. ಈ ಸಮಸ್ಯೆಯನ್ನು ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಗಮನಕ್ಕೆ ತರಲಾಗಿದೆ. ಇಂತಹ ವಹಿವಾಟು ತಡೆಯಲು ಕ್ರಮಕೈಗೊಳ್ಳಲಾಗುತ್ತಿದೆ.

ಆರೋಪಿಗಳು ಪೋರ್ಟಲ್‌ನ ತಾಂತ್ರಿಕ ವೈಶಿಷ್ಟ್ಯಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ, ಭೂ ದಾಖಲೆಗಳನ್ನು ಡೌನ್‌ಲೋಡ್ ಮಾಡಿದ್ದಾರೆ ಮತ್ತು ಬಯೋಮೆಟ್ರಿಕ್‌ಗಳನ್ನು ಸ್ಕ್ಯಾನ್ ಮಾಡಿದ್ದಾರೆ. ಇದಲ್ಲದೆ, ಅವರು ಫೋಟೋಶಾಪ್ ಮೂಲಕ ಬಯೋಮೆಟ್ರಿಕ್ಸ್ ಅನ್ನು ಅಭಿವೃದ್ಧಿಪಡಿಸಿದ್ದರು. ನಂತರ ಥರ್ಮಲ್ ಇಮೇಜ್ ಅನ್ನು ಸಿಲಿಕಾನ್ ಪೇಪರ್‌ನಲ್ಲಿ ಹಾಕಿದ್ದರು. ಬಳಿಕ ಮೈಕ್ರೋ ಎಟಿಎಂಗಳಿಂದ ಹಣವನ್ನು ಹಿಂಪಡೆದಿದ್ದರು ಎಂದು ಆಯುಕ್ತರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT