ಸಿಎಂ ಸಿದ್ದರಾಮಯ್ಯ- ಪ್ರಧಾನಿ ನರೇಂದ್ರ ಮೋದಿ 
ರಾಜ್ಯ

ಜೀವ ರಕ್ಷಕ ಚುಚ್ಚು ಮದ್ದೊಂದಕ್ಕೆ ಆಮದು ತೆರಿಗೆ ವಿನಾಯಿತಿ ನೀಡಲು ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ

ಮಗುವೊಂದರ ಜೀವ ಉಳಿಸುವುದಕ್ಕಾಗಿ ಅತಿ ದುಬಾರಿ ಜೀವ ರಕ್ಷಕ ಚುಚ್ಚು ಮದ್ದೊಂದಕ್ಕೆ ಆಮದು ತೆರಿಗೆ ವಿನಾಯಿತಿ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಅಪರೂಪದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಗುವೊಂದರ ಜೀವ ಉಳಿಸುವುದಕ್ಕಾಗಿ ಅತಿ ದುಬಾರಿ ಜೀವ ರಕ್ಷಕ ಚುಚ್ಚು ಮದ್ದೊಂದಕ್ಕೆ ಆಮದು ತೆರಿಗೆ ವಿನಾಯಿತಿ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

15 ತಿಂಗಳ ಮಗು ಮೌರ್ಯಗೆ, ನರಮಂಡಲದ ಮೇಲೆ ಪ್ರತಿಕೂಲ ಪರಿಣಾಮ ಬೀರುವಂತಹ ಬೆನ್ನುಮೂಳೆಯ ಸ್ನಾಯು ಕ್ಷೀಣತೆ (SMA)ಯ ಸಮಸ್ಯೆ ಎದುರಾಗಿದ್ದು, ಈ ಆರೋಗ್ಯ ಸಮಸ್ಯೆಯಿಂದ ಮಗುವನ್ನು ಉಳಿಸುವುದಕ್ಕಾಗಿ ಸುಮಾರು 17.5 ಕೋಟಿ ರೂಪಾಯಿ ಮೌಲ್ಯದ ಜೋಲೊಗೆನ್ಸ್ಮಾ (zologensma) ಎಂಬ ಔಷಧ ನೀಡುವ ಅಗತ್ಯವಿದೆ. ಈ ಔಷಧದ ಬೆಲೆಯೇ ಅತಿ ದುಬಾರಿಯಾಗಿದ್ದು ಅದಕ್ಕೆ ಆಮದು ತೆರಿಗೆ ವಿಧಿಸಿದರೆ ಅದರ ಶುಲ್ಕ ಮತ್ತಷ್ಟು ಹೆಚ್ಚಳವಾಗಲಿದೆ.

ಈ ಹಿನ್ನೆಲೆಯಲ್ಲಿ ಅ.27 ರಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಮಗುವಿವ ಪೋಷಕರಿಗೆ ದುಬಾರಿ ಔಷಧಿಗೆ ಹೊಂದಿಸುವಷ್ಟು ಹಣ ಇಲ್ಲದ ಕಾರಣ ಆಮದು ತೆರಿಗೆ ವಿನಾಯಿತಿ ಜೊತೆಗೆ ಪಿಎಂ ಕೇರ್ಸ್ ನಿಂದ ಕುಟುಂಬಕ್ಕೆ ನೆರವು ನೀಡುವಂತೆಯೂ ಮನವಿ ಮಾಡಿದ್ದಾರೆ.

SMA ಎಂಬುದು ನರಸ್ನಾಯುಕ ಆನುವಂಶಿಕ ಅಸ್ವಸ್ಥತೆಯಾಗಿದ್ದು, ದೇಹದಲ್ಲಿನ ಸ್ವಯಂಪ್ರೇರಿತ ಸ್ನಾಯುವಿನ ಚಲನೆಯನ್ನು ನಿಯಂತ್ರಿಸುವ ನರ ಕೋಶಗಳ ಮೇಲೆ ಪರಿಣಾಮ ಬೀರುತ್ತದೆ. ಇದು ತೋಳುಗಳು, ಕಾಲುಗಳು, ಮುಖ, ಎದೆ, ಗಂಟಲು ಮತ್ತು ನಾಲಿಗೆಯಲ್ಲಿನ ನಿಯಂತ್ರಣ ಚಲನೆಯ ಮೇಲೆ ಪರಿಣಾಮ ಬೀರುತ್ತದೆ, ಜೊತೆಗೆ ಮಾತನಾಡುವುದು, ನಡೆಯುವುದು, ನುಂಗುವುದು ಮತ್ತು ಉಸಿರಾಟದಂತಹ ಅಸ್ಥಿಪಂಜರದ ಸ್ನಾಯುವಿನ ಚಟುವಟಿಕೆಯ ಮೇಲೆ ಪರಿಣಾಮ ಬೀರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT