ಸಾದಂರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕೆಲಸಕ್ಕೆ ಸೇರಿದ ಒಂದೇ ತಿಂಗಳಲ್ಲಿ 3 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ ಕದ್ದ ಮನೆಗೆಲಸದವ!

ನಗರದ ಆಭರಣ ವ್ಯಾಪಾರಿಯೊಬ್ಬರ ಮನೆಯಲ್ಲಿ ಮನೆಗೆಲಸಕ್ಕೆ ಸೇರಿದ್ದ ವ್ಯಕ್ತಿಯೊಬ್ಬ ಒಂದೇ ತಿಂಗಳಲ್ಲಿ ಬರೋಬ್ಬರಿ 4 ಕೆಜಿ ಚಿನ್ನ ಮತ್ತು 32 ಕೆಜಿ ಬೆಳ್ಳಿ ಆಭರಣಗಳು ಹಾಗೂ ಸುಮಾರು 9 ಲಕ್ಷ ರೂ.ನಗದು ಸೇರಿ 3 ಕೋಟಿ ರೂ. ಮೌಲ್ಯದ...

ಬೆಂಗಳೂರು: ನಗರದ ಆಭರಣ ವ್ಯಾಪಾರಿಯೊಬ್ಬರ ಮನೆಯಲ್ಲಿ ಮನೆಗೆಲಸಕ್ಕೆ ಸೇರಿದ್ದ ವ್ಯಕ್ತಿಯೊಬ್ಬ ಒಂದೇ ತಿಂಗಳಲ್ಲಿ ಬರೋಬ್ಬರಿ 4 ಕೆಜಿ ಚಿನ್ನ ಮತ್ತು 32 ಕೆಜಿ ಬೆಳ್ಳಿ ಆಭರಣಗಳು ಹಾಗೂ ಸುಮಾರು 9 ಲಕ್ಷ ರೂ.ನಗದು ಸೇರಿ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾನೆ.

ಪ್ರಮುಖ ಆರೋಪಿ ಕೇತಾರಾಮ್ ಎಂಬಾತನನ್ನು ಕಳೆದ ಒಂದು ತಿಂಗಳ ಹಿಂದೆ ಆಭರಣ ವ್ಯಾಪಾರಿಯ ಮನೆ ಮತ್ತು ಅಂಗಡಿ ಸ್ವಚ್ಛಗೊಳಿಸಲು ನೇಮಿಸಲಾಗಿತ್ತು. ಚಿನ್ನಾಭರಣ ವ್ಯಾಪಾರಿ ಮುಂಬೈಗೆ ತೆರಳಿದ್ದಾಗ ಆರೋಪಿಗಳು ಆಭರಣದೊಂದಿಗೆ ಪರಾರಿಯಾಗಿದ್ದಾರೆ.

ಓ ಕೆ ರಸ್ತೆಯಲ್ಲಿರುವ ಕಾಂಚನಾ ಜ್ಯುವೆಲರ್ಸ್‌ನಲ್ಲಿ ಭಾನುವಾರ ಬೆಳಗ್ಗೆ 7 ರಿಂದ ಮಧ್ಯಾಹ್ನ 3 ಗಂಟೆಯ ನಡುವೆ ಕಳ್ಳತನ ನಡೆದಿದೆ. 

ಈ ಸಂಬಂಧ ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಂಕಿತರನ್ನು ಕೇತಾರಾಮ್, ರಾಕೇಶ್ ಮತ್ತು ದಿನೇಶ್ ಎಂದು ಗುರುತಿಸಲಾಗಿದೆ. 

ವಿವಿ ಪುರಂ ನಿವಾಸಿ ಮತ್ತು ಕಾಂಚನಾ ಜ್ಯುವೆಲರ್ಸ್ ಮಾಲೀಕ 70 ವರ್ಷದ ಅರವಿಂದ್ ಕುಮಾರ್ ತಾಡೆ ಅವರು ಸೋಮವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಕೇತಾರಾಮ್, ತಾಡೆ ಅವರ ನಿವಾಸದಲ್ಲಿ ಮನೆಗೆಲಸ  ಮಾಡುತ್ತಿದ್ದರು. ಅಲ್ಲದೆ ಜ್ಯುವೆಲ್ಲರಿ ಶಾಪ್ ಅನ್ನು ಕ್ಲೀನ್ ಮಾಡಲು ಬರುತ್ತಿದ್ದ. ಕಳ್ಳತನವಾದ ದಿನ ತಾಡೆ ಅವರು ಯಾವುದೋ ಕೆಲಸದ ಮೇಲೆ ಮುಂಬೈಗೆ ಹೋಗಿದ್ದರು. ಭಾನುವಾರವಾದ್ದರಿಂದ ಅವರ ಕುಟುಂಬ ಸದಸ್ಯರು ಸಹ ಹೊರಗೆ ಹೋಗಿದ್ದರು. ಕುಟುಂಬ ಸದಸ್ಯರ ಅನುಪಸ್ಥಿತಿಯಲ್ಲಿ ಕೇತಾರಾಮ್ ಆಭರಣ ಅಂಗಡಿಯ ಕೀಗಳನ್ನು ತೆಗೆದುಕೊಂಡು, ಇತರ  ಇಬ್ಬರೊಂದಿಗೆ ಸೇರಿ 4.3 ಕೆಜಿ ಚಿನ್ನಾಭರಣ ಹಾಗೂ 32 ಕೆಜಿ ಬೆಳ್ಳಿ ಆಭರಣಗಳನ್ನು ಕದ್ದೊಯ್ದಿದ್ದಾರೆ.

ಕಳ್ಳತನ ಮಾಡುವಾಗ ಆರೋಪಿಗಳು ಸಿಸಿಟಿವಿ ಸಂಪರ್ಕ ಕಡಿತಗೊಳಿಸಿದ್ದರು. ಕಳ್ಳತನದ ಬಗ್ಗೆ ತಿಳಿದ ಅಕ್ಕಪಕ್ಕದ ಅಂಗಡಿ ಮಾಲೀಕರು ತಾಡೆ ಅವರ ಮಗನಿಗೆ ಮಾಹಿತಿ ನೀಡಿದ್ದಾರೆ. 

ಪ್ರಮುಖ ಆರೋಪಿ ಕೇತು ರಾಮ್ ಮತ್ತು ಇತರ ಇಬ್ಬರ ತಲೆಮರೆಸಿಕೊಂಡಿದ್ದು, ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ನಮ್ಮಲ್ಲಿ ಪ್ರಮುಖ ಆರೋಪಿಗಳ ವಿವರಗಳಿವೆ ಮತ್ತು ನಾವು ಅದರ ಮೇಲೆ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT