ಹಾಸನಾಂಬ ದೇವಾಲಯ 
ರಾಜ್ಯ

ನಗರಸಭೆ ಅಧ್ಯಕ್ಷರು, ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡುವೆ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ಓಪನ್

ನಗರ ಪಾಲಿಕೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕೆಲ ಪಾಲಿಕೆ ಸದಸ್ಯರ ಪ್ರತಿಭಟನೆಯ ನಡುವೆ ಗುರುವಾರ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಯಿತು.

ಹಾಸನ: ನಗರ ಪಾಲಿಕೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕೆಲ ಪಾಲಿಕೆ ಸದಸ್ಯರ ಪ್ರತಿಭಟನೆಯ ನಡುವೆ ಗುರುವಾರ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಯಿತು.

ಹಾಸನ ನಗರ ಪಾಲಿಕೆ ಅಧ್ಯಕ್ಷ ಮೋಹನ್ ಕುಮಾರ್ ನೇತೃತ್ವದಲ್ಲಿ ನಗರಸಭೆ ಸದಸ್ಯರು ಪಾಸು ಇಲ್ಲದೆ ದೇವಸ್ಥಾನದ ಒಳಗೆ ಬಿಡದ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ನಗರಸಭೆ ಅಧ್ಯಕ್ಷರು ಕೂಡ ಧರಣಿ ನಡೆಸಿ ಪೊಲೀಸರು ಹಾಗೂ ದೇವಸ್ಥಾನದ ಆಡಳಿತಾಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಕೊನೆಗೆ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ಸಮಾಧಾನಪಡಿಸಿದ ನಂತರ ಪ್ರತಿಭಟನಾಕಾರರು ದೇವಸ್ಥಾನ ಪ್ರವೇಶಿಸಿದರು.

ನಗರಸಭೆ ಅಧ್ಯಕ್ಷರಿಂದ ಪ್ರತಿಭಟನೆ

ವರ್ಷಕ್ಕೊಮ್ಮೆ ತೆರೆದಿರುವ ಹಾಸನಾಂಬ ದೇಗುಲಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಪ್ರಧಾನ ಅರ್ಚಕ ನಾಗರಾಜ ಅವರು, ದೇವಸ್ಥಾನದ ಆಡಳಿತಾಧಿಕಾರಿ ಮಾರುತಿ ಅವರ ಅನುಮತಿಯೊಂದಿಗೆ ಮಧ್ಯಾಹ್ನ 12ಗಂಟೆ 28 ನಿಮಿಷದಲ್ಲಿ ಬಾಗಿಲಿಗೆ ಪೂಜೆ ಸಲ್ಲಿಸಿ ಬೀಗ ತೆಗೆದು ದೇವಾಲಯವನ್ನು ತೆರೆಯಲಾಯಿತು. 

ನಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜನ್, ಜಿಲ್ಲಾಧಿಕಾರಿ ಸತ್ಯಭಾಮಾ ಹೆಚ್ಚುವರಿ ಎಸ್ಪಿ ತಮ್ಮಯ್ಯ ತಹಶೀಲ್ದಾರ್ ಶ್ವೇತಾ ಮತ್ತು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಭಾರೀ ಜನದಟ್ಟಣೆಯಿಂದ ದೇವಾಲಯದ ಗರ್ಭಗುಡಿ ಪ್ರವೇಶಿಸಲು ಕಷ್ಟಪಟ್ಟರು. ಸಂಪ್ರದಾಯದಂತೆ ನಂಜರಾಜೇ ಅರಸ್ ದೇವಸ್ಥಾನದ ಮುಂಭಾಗದಲ್ಲಿ ಅಳವಡಿಸಿದ್ದ ಬಾಳೆ ಹಣ್ಣಿನ ಗಿಡವನ್ನು ಕಡಿದ ನಂತರ ದೇವಸ್ಥಾನ ತೆರೆಯಲಾಯಿತು.

ಧಾರ್ಮಿಕ ವಿಧಿವಿಧಾನಗಳನ್ನು ನಿರ್ವಹಿಸಲು ಮತ್ತು  ದೇವಿಯನ್ನು ಸ್ವಚ್ಛಗೊಳಿಸಿ ಹೂವಿನಿಂದ ಅಲಂಕರಿಸಲು ಇಂದು ದೇವಾಲಯ ಓಪನ್ ಆಗಿದೆ.ನಾಳೆಯಿಂದ ನವೆಂಬರ್ 14 ರವರೆಗೆ ವಾರದ ಎಲ್ಲಾ ದಿನ ದೇವಾಲಯದ ಬಾಗಿಲು ಓಪನ್ ಆಗಿರುತ್ತದೆ. ಈ ಸಂದರ್ಭದಲ್ಲಿ ಮಾತನಾಡಿದ  ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ದೀಪ ಬೆಳಗುತ್ತಿದ್ದು, ಕಳೆದ ವರ್ಷ ದೇವಿಗೆ ಹಾಕಿದ ಹೂವುಗಳು ತಾಜಾತನ ತೋರುತ್ತಿವೆ. ಗರ್ಭಗುಡಿ ಪ್ರವೇಶಿಸಿದ ತಕ್ಷಣ ದೀಪ ಬೆಳಗುತ್ತಿರುವುದು ಮತ್ತು ತಾಜಾ ಹೂವುಗಳನ್ನು ನೋಡಿದಾಗ ಆಶ್ಚರ್ಯವಾಯಿತು ಎಂದು ಸಚಿವರು ಹೇಳಿದರು. 

14 ದಿನಗಳ ಹಾಸನಾಂಬ ಉತ್ಸವದ ಯಶಸ್ಸಿಗೆ ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಸಹಕರಿಸಬೇಕು ಎಂದು ಸಚಿವರು ಕೋರಿದ್ದಾರೆ. ಈ ವರ್ಷ 10 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯನ್ನು ಜಿಲ್ಲಾಡಳಿತ ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT