ಸಾಂದರ್ಭಿಕ ಚಿತ್ರ 
ರಾಜ್ಯ

ಅಪಹರಣಕ್ಕೊಳಗಾಗಿದ್ದ ಬೆಂಗಳೂರಿನ ಪಿಯು ವಿದ್ಯಾರ್ಥಿ ಅರಕಲಗೂಡು ಬಳಿ ರಕ್ಷಣೆ

ಬೆಂಗಳೂರಿನ ನಾಗಾರ್ಜುನ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಚಿರಾಗ್(21)ನನ್ನು ಅಪಹರಿಸಿದ್ದ ನಾಲ್ವರು ದುಷ್ಕರ್ಮಿಗಳು ಬುಧವಾರ ಹಾಸನದ ಅರಕಲಗೂಡು ಬಳಿ ಬಿಟ್ಟು ಹೋಗಿದ್ದಾರೆ.

ಹಾಸನ: ಬೆಂಗಳೂರಿನ ನಾಗಾರ್ಜುನ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಚಿರಾಗ್(21)ನನ್ನು ಅಪಹರಿಸಿದ್ದ ನಾಲ್ವರು ದುಷ್ಕರ್ಮಿಗಳು ಬುಧವಾರ ಹಾಸನದ ಅರಕಲಗೂಡು ಬಳಿ ಬಿಟ್ಟು ಹೋಗಿದ್ದಾರೆ.

ಬೆಂಗಳೂರಿನ ಯಲಹಂಕ ಪೊಲೀಸ್ ವ್ಯಾಪ್ತಿಯ ಅನಂತಪುರ ಎಕ್ಸ್‌ಟೆನ್ಶನ್‌ನ ಕೃಷ್ಣೇಗೌಡರ ಪುತ್ರ ಚಿರಾಗ್‌ನನ್ನು ದುಷ್ಕರ್ಮಿಗಳು ಅಪಹರಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಚಿರಾಗ್ ಕಾಲೇಜಿಗೆ ಹೋಗುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ನಾಲ್ವರು ಅಪರಿಚಿತರು ಕಾರಿನಲ್ಲಿ ಕರೆದೊಯ್ದಿದ್ದಾರೆ. ಅರಕಲಗೂಡು ಸಮೀಪದ ಶನಿವಾರಸಂತೆ ರಸ್ತೆಯಲ್ಲಿ ಮರದ ಕೆಳಗೆ ಕುಳಿತಿದ್ದ ಚಿರಾಗ್‌ ಫೋನ್ ಮಾಡಿದ ನಂತರ ಅರಕಲಗೂಡು ಪೊಲೀಸರು ರಕ್ಷಿಸಿದ್ದಾರೆ.

ಚಿರಾಗ್ ದಾರಿಹೋಕನ ಫೋನ್ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಚಿರಾಗ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಅಪಹರಣಕಾರರು ಕೆಲವು ರಾಸಾಯನಿಕಗಳನ್ನು ಸಿಂಪಡಿಸಿದ ನಂತರ ಚಿರಾಗ್‌ನನ್ನು ಕಾರಿನಲ್ಲಿ ಕರೆದೊಯ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT