ರಾಮಲಿಂಗಾರೆಡ್ಡಿ, ಡಾ. ಸಿ.ಎನ್. ಮಂಜುನಾಥ್ 
ರಾಜ್ಯ

KSRTC ಉದ್ಯೋಗಿಗಳಿಗೆ ವೈದ್ಯಕೀಯ ತಪಾಸಣೆ: ಜಯದೇವ ಸಂಸ್ಥೆಯೊಂದಿಗೆ ಒಪ್ಪಂದ

ಕೆಎಸ್ ಆರ್ ಟಿಸಿ ತನ್ನ ಎಲ್ಲಾ ಉದ್ಯೋಗಿಗಳಿಗೆ 10 ರೀತಿಯ ಹೃದಯ ವೈದ್ಯಕೀಯ ತಪಾಸಣೆಗಳನ್ನು ನಡೆಸಲು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಗುರುವಾರ ಐದು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಬೆಂಗಳೂರು: ಕೆಎಸ್ ಆರ್ ಟಿಸಿ ತನ್ನ ಎಲ್ಲಾ ಉದ್ಯೋಗಿಗಳಿಗೆ 10 ರೀತಿಯ ಹೃದಯ ವೈದ್ಯಕೀಯ ತಪಾಸಣೆಗಳನ್ನು ನಡೆಸಲು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಗುರುವಾರ ಐದು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಆರೋಗ್ಯವಂತ ಉದ್ಯೋಗಿಗಳು ಸಂಸ್ಥೆಗೆ ಆಸ್ತಿ ಎಂದು ಪರಿಗಣಿಸುತ್ತದೆ ಎಂದು ಕೆಎಸ್ ಆರ್ ಟಿಸಿ  ತಿಳಿಸಿದೆ.

40 ವರ್ಷಕ್ಕಿಂತ ಮೇಲ್ಪಟ್ಟ ಚಾಲಕರು, ಕಂಡಕ್ಟರ್‌ಗಳು ಮತ್ತು ಇತರ ಸಿಬ್ಬಂದಿಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತವೆ. ಪ್ರಸ್ತುತ ಕೆಎಸ್‌ಆರ್‌ಟಿಸಿಯಲ್ಲಿ 34,000 ಉದ್ಯೋಗಿಗಳಿದ್ದು, ಅದರಲ್ಲಿ 24,686 ಚಾಲಕರು ಮತ್ತು ಕಂಡಕ್ಟರ್‌ ಗಳಿದ್ದಾರೆ ಎಂದು ಕೆಎಸ್ ಆರ್ ಟಿಸಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಜಯದೇವ ಸಂಸ್ಥೆಯೊಂದಿಗೆ ಮಾಡಿಕೊಂಡಿರುವ ಒಪ್ಪಂದವು ಹೃದಯಾಘಾತವನ್ನು ಗುರುತಿಸಲು ಮತ್ತು ತಡೆಗಟ್ಟಲು ಮತ್ತು ಆ ಮೂಲಕ ನೌಕರರ ಜೀವವನ್ನು ಉಳಿಸಲು ನಿರಂತರ ಹೃದಯ ಸಂಬಂಧಿ ಮತ್ತು ಇತರ ತಪಾಸಣೆಗಳನ್ನು ಸುಗಮಗೊಳಿಸುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ

ನಿಗಮದ ಅಭಿವೃದ್ಧಿಯಲ್ಲಿ ನೌಕರರು ಪ್ರಮುಖ ಪಾತ್ರ ವಹಿಸುತ್ತಿದ್ದು, ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT