ಸಾಂದರ್ಭಿಕ ಚಿತ್ರ 
ರಾಜ್ಯ

ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ: ಬಾಗಲಕೋಟೆ ವ್ಯಕ್ತಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಮಂಗಳೂರು: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಬಾಗಲಕೋಟೆ ಜಿಲ್ಲೆಯ ಹರಡೊಳ್ಳಿ ನಿವಾಸಿ ಶ್ರೀಕಾಂತ್  ತಪ್ಪಿತಸ್ಥರೆಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್‌ಟಿಎಸ್‌ಸಿ-II (ಪೋಕ್ಸೊ) ನ್ಯಾಯಾಲಯ ಪರಿಗಣಿಸಿದ್ದು, ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.

ಸಂತ್ರಸ್ತೆ ತನ್ನ ಪೋಷಕರೊಂದಿಗೆ ಬಜ್ಪೆ ಠಾಣೆ ವ್ಯಾಪ್ತಿಯ ಕರಂಬಾರ್ ಗ್ರಾಮದ ಕಂಪನಿಯ ಶೆಡ್‌ನಲ್ಲಿ ನೆಲೆಸಿದ್ದಳು. ಆರೋಪಿ ಸಂತ್ರಸ್ತೆಯ ಪಕ್ಕದ ಶೆಡ್‌ನಲ್ಲಿ ವಾಸವಾಗಿದ್ದ. ಸಂತ್ರಸ್ತೆಯ ಪೋಷಕರು ಮನೆಯಿಂದ ದೂರ ಇದ್ದಾಗ ಆರೋಪಿ ಪ್ರೀತಿಸುವ ನೆಪದಲ್ಲಿ ಸಂತ್ರಸ್ತೆಯನ್ನು ಮನವೊಲಿಸಿದ್ದು,  ಏಪ್ರಿಲ್ 12, 2019 ರಿಂದ ಹಲವಾರು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. 

 ಸಂತ್ರಸ್ತೆಯ ಫೋಟೋಗಳನ್ನು ತೆಗೆದುಕೊಂಡಿದ್ದ ಆರೋಪಿ, ಯಾರಿಗಾದರೂ ವಿಷಯ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.  ಶಾಲೆಯಲ್ಲಿ ಅಸ್ವಸ್ಥಳಾಗಿ ಬಿದ್ದಿದ್ದ ಸಂತ್ರಸ್ತೆಗೆ  ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿಯಾಗಿದ್ದು, ಮಗುವಿಗೆ ಜನ್ಮ ನೀಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಎಸಿಪಿ ಶ್ರೀನಿವಾಸ್ ಗೌಡ ಹಾಗೂ ಎಸಿಪಿ ಕೆ ಯು ಬೆಳ್ಳಿಯಪ್ಪ ಪ್ರಾಥಮಿಕ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯನ್ನು ತಪ್ಪಿತಸ್ಥನೆಂದು ಪರಿಗಣಿಸಿದ ನ್ಯಾಯಾಲಯ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n), 376(3) ಮತ್ತು 506 ರ ಅಡಿಯಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿತು. ಸಂತ್ರಸ್ತ ಮಹಿಳೆಗೆ 10.50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಧೀಶರು ಆದೇಶಿಸಿದರು. ಸಂತ್ರಸ್ತೆಯ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಸಹನಾದೇವಿ ಮತ್ತು ಜ್ಯೋತಿ ಪ್ರಮೋದ್ ನಾಯಕ್ ವಾದ ಮಂಡಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT