ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ 
ರಾಜ್ಯ

ಮಹದೇವಪುರ ಐಟಿ ಕಾರಿಡಾರ್‌ನಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿ ಮುಚ್ಚಿ: ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಸೂಚನೆ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಹದೇವಪುರ ವಲಯದ ಅಧಿಕಾರಿಗಳಿಗೆ ಟೆಕ್ ಕಾರಿಡಾರ್‌ಗಳ ಉದ್ದಕ್ಕೂ ಇರುವ ರಸ್ತೆ ಗುಂಡಿಗಳನ್ನು ಮತ್ತು ಅತಿಕ್ರಮಿತ ಫುಟ್‌ಪಾತ್‌ಗಳನ್ನು...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಹದೇವಪುರ ವಲಯದ ಅಧಿಕಾರಿಗಳಿಗೆ ಟೆಕ್ ಕಾರಿಡಾರ್‌ಗಳ ಉದ್ದಕ್ಕೂ ಇರುವ ರಸ್ತೆ ಗುಂಡಿಗಳನ್ನು ಮತ್ತು ಅತಿಕ್ರಮಿತ ಫುಟ್‌ಪಾತ್‌ಗಳನ್ನು ಆದ್ಯತೆ ಆಧಾರದ ಮೇಲೆ ತೆರವುಗೊಳಿಸುವಂತೆ ಸೂಚಿಸಿದರು.

ಮಹದೇವಪುರದಲ್ಲಿ ಗುರುವಾರ ವಲಯ ಅಧಿಕಾರಿಗಳೊಂದಿಗೆ ನಡೆದ ಸಮನ್ವಯ ಸಭೆಯ ನಂತರ ಗಿರಿನಾಥ್ ಈ ನಿರ್ದೇಶನ ನೀಡಿದ್ದಾರೆ. ಅಧಿಕಾರಿಗಳು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ನಂತರ, ವಾರ್ಡ್ ರಸ್ತೆಗಳನ್ನು ಸರಿಪಡಿಸಬೇಕು ಎಂದು ಸೂಚಿಸಿದ್ದಾರೆ.

ಬಿಬಿಎಂಪಿ ಅನುಮತಿ ಇಲ್ಲದೆ ರಸ್ತೆಗಳನ್ನು ಅಗೆದರೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಂತಹ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರು ಆದೇಶಿಸಿದ್ದಾರೆ.

ಅನಧಿಕೃತ ಕಟ್ಟಡಗಳು ನಿರ್ಮಾಣವಾಗುತ್ತಿರುವ ಬಗ್ಗೆ ಜಂಟಿ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘನೆಯಾದಲ್ಲಿ ಕ್ರಮ ಕೈಗೊಳ್ಳುವಂತೆ ವಾರ್ಡ್ ಎಂಜಿನಿಯರ್‌ಗಳು ಮತ್ತು ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕರಿಗೆ ಆಯುಕ್ತರು ಸೂಚಿಸಿದರು.

ಘನತ್ಯಾಜ್ಯ ನಿರ್ವಹಣಾ ಇಲಾಖೆ ಕಾಮಗಾರಿ ಹಾಗೂ ಫುಟ್‌ಪಾತ್‌ ಒತ್ತುವರಿ ತೆರವುಗೊಳಿಸುವಂತೆ ವಲಯ ಆಯುಕ್ತ ಇಬ್ರಾಹಿಂ ಮೈಗೂರು ಹಾಗೂ ಜಂಟಿ ಆಯುಕ್ತೆ ಕೆ.ದಾಕ್ಷಾಯಿಣಿ ಅವರಿಗೆ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT