ಮೆಟ್ರೋ ರೈಲು ಸಾಂದರ್ಭಿಕ ಚಿತ್ರ 
ರಾಜ್ಯ

ಭಾನುವಾರ ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಭಾಗಶ: ಸ್ಥಗಿತ!

ನವೆಂಬರ್ 5 ಭಾನುವಾರದಂದು ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಭಾಗಶ: ಸ್ಥಗಿತವಾಗಲಿದೆ.ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಗೆ ಬದಲಾಗಿ 9 ಗಂಟೆಗೆ ಪ್ರಾರಂಭವಾಗಲಿದೆ.

ಬೆಂಗಳೂರು: ನವೆಂಬರ್ 5 ಭಾನುವಾರದಂದು ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಭಾಗಶ: ಸ್ಥಗಿತವಾಗಲಿದೆ.

ಹೌದು. ಅಂದು ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಗೆ ಬದಲಾಗಿ 9 ಗಂಟೆಗೆ ಪ್ರಾರಂಭವಾಗಲಿದೆ.

ಬೆಳಗ್ಗೆ 9 ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ತಿಳಿಸಿದೆ.

ಚಲ್ಲಘಟ್ಟ ಮತ್ತು ಎಂ.ಜಿ. ರಸ್ತೆ, ಬೈಯಪ್ಪನಹಳ್ಳಿ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವಿನ ಮಾರ್ಗಗಳಲ್ಲಿ ರೈಲು ಸೇವೆ ಬೆಳಗ್ಗೆ 7 ಗಂಟೆಯಿಂದಲೇ ವೇಳಾಪಟ್ಟಿ ಪ್ರಕಾರ ಪ್ರಾರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT