ಬೆಂಗಳೂರು ವಾಯು ಮಾಲಿನ್ಯ (ಸಂಗ್ರಹ ಚಿತ್ರ) 
ರಾಜ್ಯ

ಮಳೆ ಎಫೆಕ್ಟ್...: ಬೆಂಗಳೂರಿನಲ್ಲಿ ತಗ್ಗಿದ ವಾಯು ಮಾಲಿನ್ಯ, 19ರಲ್ಲಿ AQI; Accu Weather ಹವಾಮಾನ ವರದಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆ ನಗರದ ವಾಯುಮಾಲಿನ್ಯ ಮಟ್ಟವನ್ನು ಕೊಂಚ ಪ್ರಮಾಣದಲ್ಲಿ ತಗ್ಗಿಸಿದ್ದು, ಶನಿವಾರ ನಗರದಲ್ಲಿನ ವಾಯು ಗುಣಮಟ್ಟ ಪ್ರಮಾಣ 19ಕ್ಕೆ ಇಳಿದಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಆಕ್ಯು ವೆದರ್ ವರದಿ ಮಾಡಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆ ನಗರದ ವಾಯುಮಾಲಿನ್ಯ (Air pollution) ಮಟ್ಟವನ್ನು ಕೊಂಚ ಪ್ರಮಾಣದಲ್ಲಿ ತಗ್ಗಿಸಿದ್ದು, ಶನಿವಾರ ನಗರದಲ್ಲಿನ ವಾಯು ಗುಣಮಟ್ಟ (Air Quality Index) ಪ್ರಮಾಣ 19ಕ್ಕೆ ಇಳಿದಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಆಕ್ಯು ವೆದರ್ ವರದಿ ಮಾಡಿದೆ.

ವಾಯುಮಾಲಿನ್ಯ (Air Pollution)ದ ವಿಚಾರವಾಗಿ ಸದಾ ಸುದ್ದಿಯಲ್ಲಿರುವ ದೇಶದ ರಾಜಧಾನಿ ದೆಹಲಿ (Delhi) ಹಾದಿಯಲ್ಲೇ ಕರ್ನಾಟಕ (Karnataka) ರಾಜಧಾನಿ ಬೆಂಗಳೂರು (Bengaluru) ದಾಪುಗಾಲಿರಿಸುತ್ತಿದ್ದು, ಸಿಲಿಕಾನ್ ಸಿಟಿಯ ಗಾಳಿಯ ಗುಣಮಟ್ಟ (Air Quality Index) ಕಳಪೆ ಮಟ್ಟಕ್ಕೆ ಕುಸಿಯುತ್ತಿರುವ ಕುರಿತು ಈ ಹಿಂದೆ ವರದಿಯಾಗಿತ್ತು. ಆದರೆ ಇದೀಗ ನಗರದಲ್ಲಿ ನಿನ್ನೆ ಸುರಿದ ಮಳೆ ನಗರಲ್ಲಿನ ಧೂಳಿನ ಕಣಗಳು ಗಾಳಿಯೊಂದಿಗೆ ಸೇರುವುದನ್ನು ತಡೆದಿದೆ. ಪರಿಣಾಮ ಶನಿವಾರ ನಗರದಲ್ಲಿನ ವಾಯು ಗುಣಮಟ್ಟ ಪ್ರಮಾಣ 19ಕ್ಕೆ ಇಳಿದಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಆಕ್ಯು ವೆದರ್ (Accu Weather) ವರದಿ ಮಾಡಿದೆ.

ಬೆಂಗಳೂರಿನ  (Bengaluru) ಇಂದಿನ ಗಾಳಿಯ ಗುಣಮಟ್ಟ ಉತ್ತಮ ಸ್ಥಿತಿಯಲ್ಲಿದ್ದು, ಇಂದಿನ ವಾಯು ಗುಣಮಟ್ಟ PM 2.6 (Fine Particulate Matter) 19 ಆಗಿದ್ದು, PM 10 (Particulate Matter)ನ ಪ್ರಮಾಣ 14ರಷ್ಟಿದೆ. ಈ ಎರಡೂ ಅಂಶಗಳ ಪ್ರಮಾಣ ಎಕ್ಸೆಲೆಂಟ್ (ಉತ್ತಮ) ಎಂದು ಆ್ಯಕ್ಯುವೆದರ್ (Accu Weather) ವರದಿ ಮಾಡಿದೆ.

ಉಳಿದಂತೆ ನಗರದಲ್ಲಿನ ಗಾಳಿಯಲ್ಲಿನ ಎನ್ಒ2 (NO2-Nitrogen Dioxide) ಪ್ರಮಾಣ 15ರಷ್ಟಿದ್ದು, ಇದು ಉತ್ತಮ ಪ್ರಮಾಣದಲ್ಲಿದೆ. ಅಂತೆಯೇ ಓಜೋನ್ (O3-Ozone)ದ ಪ್ರಮಾಣ 4ರಷ್ಟಿದ್ದು, ಕಾರ್ಬನ್ ಮಾನಾಕ್ಸೈಡ್ (CO-Carbon Monoxide) 1ರಷ್ಟಿದ್ದು, S02 ಪ್ರಮಾಣ 2ರಷ್ಟಿದೆ.

ಸಾಮಾನ್ಯವಾಗಿ ಈ So2 ಅಂದರೆ ಸಲ್ಫರ್ ಡೈಆಕ್ಸೈಡ್‌ಗೆ ನಮ್ಮನ್ನು ನಾವು ಒಡ್ಡಿಕೊಳ್ಳುವುದರಿಂದ ಗಂಟಲು ಮತ್ತು ಕಣ್ಣಿನ ಕಿರಿಕಿರಿಗೆ ಗುರಿಯಾಗಬಹುದು. ಇದು ಆಸ್ತಮಾ ಮತ್ತು ದೀರ್ಘಕಾಲದ ಬ್ರಾಂಕೈಟಿಸ್ ಅನ್ನು ಉಲ್ಬಣಗೊಳಿಸಬಹುದು ಎಂದು ಹೇಳಲಾಗಿದೆ. ಆದರೆ ಇಂದು ನಗರದಲ್ಲಿ ಈ ಎರಡೂ ಅಂಶಗಳ ಪ್ರಮಾಣ ಉತ್ತಮವಾಗಿದೆ ಎಂದು ಆ್ಯಕ್ಯು ವೆದರ್ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT