ಸಚಿವ ಕೆ.ಎಚ್.ಮುನಿಯಪ್ಪ 
ರಾಜ್ಯ

ಹಣದ ಕೊರತೆ ನಡುವಲ್ಲೂ ಅಭಿವೃದ್ಧಿ ಕಾರ್ಯ ಮುಂದುವರೆಸುವಲ್ಲಿ ಸಿದ್ದರಾಮಯ್ಯ ಸಮರ್ಥರು: ಸಚಿವ ಕೆ.ಹೆಚ್. ಮುನಿಯಪ್ಪ

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಸರ್ಕಾರ ಹಣದ ಕೊರತೆ ಎದುರಿಸುತ್ತಿದ್ದು, ಇದರ ನಡುವಲ್ಲೂ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುವಂತೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥರಾಗಿದ್ದಾರೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಅವರು ಶುಕ್ರವಾರ ಹೇಳಿದರು.

ಹುಬ್ಬಳ್ಳಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಸರ್ಕಾರ ಹಣದ ಕೊರತೆ ಎದುರಿಸುತ್ತಿದ್ದು, ಇದರ ನಡುವಲ್ಲೂ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುವಂತೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥರಾಗಿದ್ದಾರೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಅವರು ಶುಕ್ರವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ಬಾರಿ ಬಜೆಟ್‌ ಮಂಡಿಸಿದ ಖ್ಯಾತಿ ಹೊಂದಿರುವ ವ್ಯಕ್ತಿಯೊಬ್ಬರು ಮೂಲ ಲೆಕ್ಕಾಚಾರ ಮಾಡದೆ ಗ್ಯಾರಂಟಿ ಯೋಜನೆಗಳ ಜಾರಿಗೆ ತರಲು ನಿರ್ಧರಿಸಿರಲಿಲ್ಲ. ಹಣಕಾಸಿನ ಸ್ಥಿತಿಗತಿಯನ್ನು ಅರ್ಥಮಾಡಿಕೊಂಡ ನಂತರವೇ 50,000 ಕೋಟಿ ರೂಪಾಯಿಗಳ ಬಜೆಟ್ ಹಂಚಿಕೆ ಮಾಡಲಾಗಿದೆ. ಅಭಿವೃದ್ಧಿ ಕಾರ್ಯಗಳ ಮುಂದಕ್ಕೆ ಕೊಂಡೊಯ್ಯುವಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾರ ಉಪದೇಶದ ಅಗತ್ಯವಿಲ್ಲ. ಇದನ್ನು ಇತಿಹಾಸವೇ ಹೇಳುತ್ತದೆ. ಪ್ರಸ್ತುತ ಎದುರಾಗಿರುವ ಆರ್ಥಿಕ ಮುಗ್ಗಟ್ಟು ತಾತ್ಕಾಲಿಕವಾಗಿದ್ದು, ಮುಂದಿನ ದಿನಗಳಲ್ಲಿ ಪರಿಹರಿಸಲಾಗುವುದು. ಆಯಾ ಇಲಾಖೆಗಳಿಗೆ ಮಂಜೂರು ಮಾಡಿದ ಹಣವನ್ನು ಹೊರತುಪಡಿಸಿ, ಇತರ ಕಾಮಗಾರಿಗಳ ಕೈಗೊಳ್ಳಲು ಹೆಚ್ಚುವರಿ ಹಣವನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಅಧಿಕಾರ ಹಂಚಿಕೆ ಹಾಗೂ ಸಂಪುಟ ಪುನಾರಚನೆ ವಿಚಾರ ಕುರಿತು ಮಾತನಾಡಿದ ಅವರು, ಸೂಕ್ತ ಸಮಯದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು, ಆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದರು.

ಎಸ್‌ಸಿಗಳಿಗೆ ಒಳಮೀಸಲಾತಿ ಕುರಿತು ಸದಾಶಿವ ಆಯೋಗದ ವರದಿ ಜಾರಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ, ಆದರೆ, ಹಿಂದಿನ ಸರ್ಕಾರದ ನಿಲುವನ್ನು ಪರಿಶೀಲಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿವಾದ: ಮಾತುಕತೆ ಅಂದ್ರೆ ರಾಜಿ ಎಂದರ್ಥವಲ್ಲ; ಬೆಂಗಳೂರು ಭೇಟಿ ಪ್ರಯತ್ನ ಸಮರ್ಥಿಸಿಕೊಂಡ ತಮಿಳುನಾಡು ಸಿಎಂ ವಿಜಯ್!

ಕೇರಳದಲ್ಲಿ 'ಕೇಸರಿ' ನಿಷೇಧವೇ?: ಬಟ್ಟೆ ಬಣ್ಣದ ಕುರಿತು ಪ್ರಶ್ನಿಸಿದ ಪತ್ರಕರ್ತನಿಗೆ ನಟಿ ಪ್ರಿಯಾ ವಾರಿಯರ್ 'ಶಾಂತ' ತಿರುಗೇಟು!

ಬೆಂಗಳೂರಿನ ಹಾಸ್ಟೆಲ್ ರೂಂನಲ್ಲಿ IISc ವಿದ್ಯಾರ್ಥಿ ಆತ್ಮಹತ್ಯೆ; ಸ್ಥಳದಲ್ಲಿ ಡೆತ್ ನೋಟ್ ಪತ್ತೆ!

NEET leak ಹಗರಣ ತನಿಖೆಯಲ್ಲಿ ಮೇಜರ್ ಟ್ವಿಸ್ಟ್; 3 NTAಯ ವಿಷಯ ತಜ್ಞರಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆ! ವರದಿ

ಸಚಿವ ಸ್ಥಾನಕ್ಕಾಗಿ ಕೃಷ್ಣಪ್ಪ ಬಿಗಿ ಪಟ್ಟು: ಡಿಕೆಶಿ ಸಂಪುಟದಿಂದ ಒಬ್ಬರಿಗೆ ಕೊಕ್? ‘ನಾನು ರಾಜೀನಾಮೆಗೆ ಸಿದ್ಧ’ ಎಂದ ಬಾಲಕೃಷ್ಣ!