ಸಂಗ್ರಹ ಚಿತ್ರ 
ರಾಜ್ಯ

ಬರ ಪರಿಹಾರವಾಗಿ ರೂ.324 ಕೋಟಿ ಬಿಡುಗಡೆ ಮಾಡಿದ ಸರ್ಕಾರ: ಯಾವ ಜಿಲ್ಲೆಗೆ ಎಷ್ಟು?

ರಾಜ್ಯದ 31 ಜಿಲ್ಲೆಗಳ ಬರಪೀಡಿತ ತಾಲೂಕುಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್‌ಡಿಆರ್‌ಎಫ್) 324 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ಬೆಂಗಳೂರು: ರಾಜ್ಯದ 31 ಜಿಲ್ಲೆಗಳ ಬರಪೀಡಿತ ತಾಲೂಕುಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್‌ಡಿಆರ್‌ಎಫ್) 324 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಎಂದು ಈ ಹಿಂದೆ ರಾಜ್ಯ ಸರ್ಕಾರ (ಘೋಷಣೆ ಮಾಡಿತ್ತು. ಅಲ್ಲದೆ, ಕೇಂದ್ರ ಸರ್ಕಾರದ ಬಳಿ ಬರ ಪರಿಹಾರಕ್ಕೆ 17 ಸಾವಿರ ಕೋಟಿ ರೂ. ಪರಿಹಾರ ನೀಡುವಂತೆಯೂ ಮನವಿ ಮಾಡಿದೆ. ಆದರೆ, ಕೇಂದ್ರ ಸರ್ಕಾರ ಈವರೆಗೂ ಒಂದೂ ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಸರ್ಕಾರ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಬರ ಪರಿಹಾರವಾಗಿ 324 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು ನಗರ-7.50 ಕೋಟಿ ರೂ., ಬೆಂಗಳೂರು ಗ್ರಾಮಾಂತರ-6 ಕೋಟಿ ರೂ., ರಾಮನಗರ-7.50 ಕೋಟಿ ರೂ., ಕೋಲಾರ-9 ಕೋಟಿ ರೂ., ಚಿಕ್ಕಬಳ್ಳಾಪುರ-9 ಕೋಟಿ ರೂ., ತುಮಕೂರು-15 ಕೋಟಿ ರೂ., ಚಿತ್ರದುರ್ಗ-9 ಕೋಟಿ ರೂ., ದಾವಣಗೆರೆ-9 ಕೋಟಿ ರೂ., ಚಾಮರಾಜನಗರ-7.50 ಕೋಟಿ ರೂ., ಮೈಸೂರು-13.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಮಂಡ್ಯ-10.5 ಕೋಟಿ ರೂ., ಬಳ್ಳಾರಿ-7.50 ಕೋಟಿ ರೂ., ಕೊಪ್ಪಳ-10.50 ಕೋಟಿ ರೂ., ರಾಯಚೂರು-9 ಕೋಟಿ ರೂ., ಕಲಬುರಗಿ-16.50 ಕೋಟಿ ರೂ., ಬೀದರ್-4.50 ಕೋಟಿ ರೂ., ಬೆಳಗಾವಿ-22.50 ಕೋಟಿ ರೂ., ಬಾಗಲಕೋಟೆ-13.50 ಕೋಟಿ ರೂ., ವಿಜಯಪುರ-18 ಕೋಟಿ ರೂ., ಗದಗ-10.50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಹಾವೇರಿ-12 ಕೋಟಿ ರೂ., ಧಾರವಾಡ-12 ಕೋಟಿ ರೂ., ಶಿವಮೊಗ್ಗ-10.50 ಕೋಟಿ ರೂ., ಹಾಸನ-12 ಕೋಟಿ ರೂ., ಚಿಕ್ಕಮಗಳೂರು-12 ಕೋಟಿ ರೂ., ಕೊಡಗು-7.50 ಕೋಟಿ ರೂ., ದಕ್ಷಿಣ ಕನ್ನಡ-3 ಕೋಟಿ ರೂ., ಉಡುಪಿ-4.50 ಕೋಟಿ ರೂ., ಉತ್ತರ ಕನ್ನಡ-16.50 ಕೋಟಿ ರೂ., ಯಾದಗಿರಿ-9 ಕೋಟಿ ರೂ. ಹಾಗೂ ವಿಜಯನಗರ ಜಿಲ್ಲೆಗೆ 9 ಕೋಟಿ ರೂ. ಸೇರಿದಂತೆ ಒಟ್ಟು 324 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಈ ಅನುದಾನವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಪೇಯಿಸ್ ರಸೀದಿ ಮೂಲಕ ಡ್ರಾ ಮಾಡಿ, ತಮ್ಮ ಡಿಡಿಆರ್‍ಎಫ್ ಪಿಡಿ ಖಾತೆಗೆ ಜಮಾ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಜೂನ್‌ನಲ್ಲಿ ರಾಜ್ಯದಲ್ಲಿ ಶೇ.56ರಷ್ಟು ಮಳೆ ಕೊರತೆಯಾಗಿದ್ದು, ಜುಲೈನಲ್ಲಿ ಶೇ.29 ಹಾಗೂ ಆಗಸ್ಟ್‌ನಲ್ಲಿ ಶೇ.73ರಷ್ಟು ಕೊರತೆಯಾಗಿದೆ. ಕರ್ನಾಟಕದಲ್ಲಿ ಕಳೆದ 125 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT