ಸಚಿವ ಮಂಕಾಳ ವೈದ್ಯ 
ರಾಜ್ಯ

ಚುನಾವಣೆಗೂ ಮುನ್ನ ಬಿಜೆಪಿ ಯಾರನ್ನೂ ಹತ್ಯೆ ಮಾಡುವುದಿಲ್ಲ ಎಂಬ ನಂಬಿಕೆಯಲ್ಲಿದ್ದೇನೆ: ಸಚಿವ ಮಂಕಾಳ ವೈದ್ಯ

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಯಾರನ್ನೂ ಕೊಲೆ ಮಾಡುವುದಿಲ್ಲ ಎಂಬ ನಂಬಿಕೆಯಲ್ಲಿದ್ದೇನೆಂದು ಸಚಿವ ಮಂಕಾಳ್ ವೈದ್ಯ ಶನಿವಾರ ಹೇಳಿದ್ದಾರೆ.

ಕಾರವಾರ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಯಾರನ್ನೂ ಕೊಲೆ ಮಾಡುವುದಿಲ್ಲ ಎಂಬ ನಂಬಿಕೆಯಲ್ಲಿದ್ದೇನೆಂದು ಸಚಿವ ಮಂಕಾಳ್ ವೈದ್ಯ ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿಯವರು ಜನರ ಹಾದಿ ತಪ್ಪಿಸುವ ಕೆಲಸ ಮಾಡುತ್ತಾರೆಂಬ ಭಯವಿದೆ. ಮುಖ್ಯಮಂತ್ರಿಯಿಂದ ಹಿಡಿದು ಪಕ್ಷದ ಸಾಮಾನ್ಯ ಕಾರ್ಯಕರ್ತನವರೆಗೆ ಬಿಜೆಪಿ ಸತ್ಯವಂತರಾಗಿರುವ ಉದಾಹರಣೆ ಇದೆಯೇ’ ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ 2018ರ ವಿಧಾನಸಭಾ ಚುನಾವಣೆಗೂ ಮುನ್ನ ನಡೆದಿದ್ದ ಪರೇಶ್ ಮೇಸ್ತಾ ಹತ್ಯೆಯನ್ನು ಪರೋಕ್ಷವಾಗಿ ಉಲ್ಲೇಖಿಸಿದರು.

ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಬಾರದು ಎಂಬ ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

ತಮ್ಮ ಪಕ್ಷದಲ್ಲಿ ನಾಯಕರಿಲ್ಲ ಎಂಬುದನ್ನು ಈಶ್ವರಪ್ಪ ಅರ್ಥಮಾಡಿಕೊಳ್ಳಲಿ. ವಿಧಾನಸಭೆಯಲ್ಲಿಯೂ ವಿರೋಧ ಪಕ್ಷದ ನಾಯಕರೇ ಇಲ್ಲ. ಅವರು ನಮ್ಮ ಬಗ್ಗೆ ಮಾತನಾಡುವಷ್ಟು ಅರ್ಹರಲ್ಲ ಎಂದು ಹೇಳಿದರು.

15 ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ ವಿಚಾರ ಕುರಿತು ಮಾತನಾಡಿ, ಪಕ್ಷದ ಕಾರ್ಯಕರ್ತರು ಮತ್ತು ಸಚಿವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಮುಖ್ಯಮಂತ್ರಿಗಳು ನಮ್ಮನ್ನು ಆಹ್ವಾನಿಸಿದ್ದರು. ನಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದೆವು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT