ಕೊಲೆಯಾದ ಅಧಿಕಾರಿ ಪ್ರತಿಮಾ 
ರಾಜ್ಯ

ಗಣಿ-ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಹತ್ಯೆ: ಮಹಿಳಾ ಅಧಿಕಾರಿಯ ಸೋದರ ಮತ್ತು ಬೆಂಗಳೂರು ಡಿಸಿ ಹೇಳಿದ್ದೇನು?

ಭಾನುವಾರ ಬೆಂಗಳೂರು ಜನತೆಗೆ ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಗಣಿ ಭೂ ವಿಜ್ಞಾನ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕ ಪ್ರತಿಮಾ(37ವ) ಕೊಲೆ ಘಟನೆಗೆ ಸಂಬಂಧಿಸಿದಂತೆ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೆಂಗಳೂರು : ಭಾನುವಾರ ಬೆಂಗಳೂರು ಜನತೆಗೆ ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಗಣಿ ಭೂ ವಿಜ್ಞಾನ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕ ಪ್ರತಿಮಾ(37ವ) ಕೊಲೆ ಘಟನೆಗೆ ಸಂಬಂಧಿಸಿದಂತೆ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಡಿಸಿ ಕೆ.ಎ ದಯಾನಂದ್ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲಸದ ವಿಚಾರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾಗೆ ಯಾವುದೇ ರೀತಿಯ ಅಸಮಾಧಾನವಿರಲಿಲ್ಲ.ಕೆಲಸದ ವಿಚಾರವಾಗಿ ಪ್ರತಿಮಾ ಯಾವುದೇ ಗಂಭೀರ ಆರೋಪಗಳನ್ನು ಕೂಡ ಮಾಡಿರಲಿಲ್ಲ ಎಂದು ತಿಳಿಸಿದರು.

ಇದೇ ವಿಷಯವಾಗಿ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಶಹಪುರವಾಡ್ ಪ್ರತಿಕ್ರಿಯಿಸಿದ್ದು, ನಿನ್ನೆ ಸಂಜೆ 8 ಗಂಟೆಗೆ ಪ್ರತಿಮಾ ಮನೆಗೆ ಬಂದಿದ್ದರು. ಇಂದು ಬೆಳಿಗ್ಗೆ ಮನೆಯವರು ಫೋನ್ ಮಾಡಿದ್ದರು.ಬೆಳಗ್ಗೆ ಪ್ರತಿಮಾ ಅವರ ಸಹೋದರ ಮನೆಗೆ ಬಂದು ನೋಡಿದಾಗ ಕೊಲೆ ಕೇಸ್ ಬಹಿರಂಗವಾಗಿದೆ.

ಮೊದಲು ಉಸಿರು ಹುಟ್ಟಿಸಿ ನಂತರ ಕತ್ತು ಕೊಯ್ದು ಕೊಲೆ ಮಾಡಲಾಗಿದೆ.ಐದು ವರ್ಷದಿಂದ ಡಿಪ್ಯೂಟಿ ಡೈರೆಕ್ಟರ್ ಪ್ರತಿಮಾ ಒಬ್ಬರೇ ವಾಸವಾಗಿದ್ದರು. ಕೊಲೆಯಾದ ಪ್ರತಿಮಾ ಮನೆಯಲ್ಲಿ ಯಾವುದೇ ರೀತಿಯಾದಂತಹ ವಸ್ತು ಕಳ್ಳತನವಾಗಿಲ್ಲ. ಆರೋಪಿಗಳ ಬಂಧನಕ್ಕಾಗಿ ಈಗಾಗಲೇ ಪೊಲೀಸರ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಪ್ರತಿಮಾ ಅವರ ಸೋದರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ನನ್ನ ಸೋದರಿಯ ಈ ಸಾವಿನಿಂದ ಬಹಳ ಆಘಾತಕ್ಕೊಳಗಾಗಿದ್ದೇವೆ. ನಮಗೆ ಯಾರೂ ಶತ್ರುಗಳಿಲ್ಲ. ಯಾರು ಏಕೆ ಕೊಲೆ ಮಾಡಿದರು ಎಂದು ಗೊತ್ತಾಗುತ್ತಿಲ್ಲ. ನಮಗೆ ಸರ್ಕಾರದ ಮೇಲೆ ನಂಬಿಕೆಯಿದೆ. ಪೊಲೀಸರಿಂದ ಸೂಕ್ತ ತನಿಖೆ ನಡೆಸಿ ಸತ್ಯ ಹೊರಗೆ ಬರುತ್ತದೆ ಎಂಬ ವಿಶ್ವಾಸವಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.

ನನ್ನ ಸಹೋದರಿಯನ್ನು ಕೆಲಸದ ವಿಚಾರಕ್ಕೆ ಕೊಲೆ ಮಾಡಲಾಗಿದೆ. ಸರ್ಕಾರದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ ಎಂದು ಅವರ ಸಹೋದರ ಗೋಳಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT