ರಾಜ್ಯ

ಬಂಡೀಪುರದಲ್ಲಿ ಆನೆ ಸಾವು: ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ

Manjula VN

ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ಆನೆ ‘ಅಕ್ಕಿ ರಾಜ’ ಸಾವನ್ನಪ್ಪಿರುವ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಘಳಿಗೆ ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.

ರಾಮಾಪುರ ಆನೆ ಶಿಬಿರದಲ್ಲಿ ಆನೆ ಸಾವಿಗೆ ಆಹಾರದ ಕೊರತೆಯೇ ಕಾರಣ ಎಂದು ಕಾರ್ಯಕರ್ತ ಜೋಸೆಫ್ ಹೂವರ್ ಅವರು ದೂರು ನೀಡಿರುವುದನ್ನು ಸಚಿವರು ಗಂಭೀರವಾಗಿ ಪರಿಗಣಿಸಿದ್ದು, ವರದಿ ಸಲ್ಲಿಸುವಂತೆ ನವೆಂಬರ್ 2 ರಂದು ಬರೆದು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.

ಮೇವು ತರಲು ವಾಹನದ ಕೊರತೆ ಎದುರಾಗಿದ್ದು, ಆಹಾರದ ಕೊರತೆಯೇ ಆನೆ ಸಾವಿಗೆ ಕಾರಣವಾಗಿದೆ. ಇದಲ್ಲದೆ ಇತರ ಕಾರಣಗಳೂ ಇವೆ. ಈ ನಿರ್ಲಕ್ಷ್ಯವು ಇತರ ಶಿಬಿರದ ಆನೆಗಳ ಸಾವಿಗೆ ಕಾರಣವಾಗದಂತೆ ಖಚಿತಪಡಿಸಿಕೊಳ್ಳಲು ವಿಚಾರಣೆಯು ಸಹಾಯ ಮಾಡುತ್ತದೆ" ಎಂದು ಹೂವರ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಒಂದು ವಾರದೊಳಗೆ ಈ ಬಗ್ಗೆ ವರದಿಯನ್ನು ತಮ್ಮ ಕಚೇರಿಗೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆಂದು ವರದಿಗಳು ತಿಳಿಸಿವೆ.

SCROLL FOR NEXT