ಬೆಂಗಳೂರಿನ ಎಂ ಜಿ ರಸ್ತೆಯಲ್ಲಿ ಇಂದು ಮಳೆಗೆ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ನೀರಿನಲ್ಲಿಯೇ ಸಾಗಿದ ಪರಿಸ್ಥಿತಿ 
ರಾಜ್ಯ

ಬೆಂಗಳೂರಿನಲ್ಲಿ ಸಂಜೆ ಧಾರಾಕಾರ ಮಳೆ, ಹಲವೆಡೆ ಟ್ರಾಫಿಕ್‌ ದಟ್ಟಣೆ! ಪೊಲೀಸರ ಸಲಹೆ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನ 2 ಗಂಟೆಯವರೆಗೂ ಬಿಸಿಲು ಕಾಣಿಸಿಕೊಂಡಿದ್ದರೂ, ನಂತರ ಏಕಾಏಕಿ ಜೋರು ಮಳೆ ಸುರಿಯಲಾರಂಭಿಸಿತು.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನ 2 ಗಂಟೆಯವರೆಗೂ ಬಿಸಿಲು ಕಾಣಿಸಿಕೊಂಡಿದ್ದರೂ, ನಂತರ ಏಕಾಏಕಿ ಜೋರು ಮಳೆ ಸುರಿಯಲಾರಂಭಿಸಿತು. ಶಿವಾಜಿನಗರ, ಕೆ. ಆರ್. ಸರ್ಕಲ್, ಕೆ.ಆರ್. ಮಾರುಕಟ್ಟೆ, ಮೆಜೆಸ್ಟಿಕ್, ಶಾಂತಿನಗರ, ಎಂಜಿ ರಸ್ತೆ, ಬಿನ್ನಿಗಾನಹಳ್ಳಿ ಮೊದಲಾದ ಕಡೆಗಳಲ್ಲಿ ಭರ್ಜರಿ ಮಳೆಯಾಗಿದ್ದು,ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು.

 ಸಂಜೆ 4-30ರ ಸುಮಾರಿನಲ್ಲಿಯೇ ಮಬ್ಬು ಕತ್ತಲಿನ ಅನುಭವವಾಯಿತು. ಇದು ವಾಹನ ಸವಾರರಿಗೆ ಸಮಸ್ಯೆ ಉಂಟು ಮಾಡಿತು. ಮಳೆಯಿಂದಾಗಿ ನಗರದಲ್ಲಿಯೂ ಟ್ರಾಫಿಕ್‌ ಹೆಚ್ಚಳವಾಗಿ, ಕೆಲವೆಡೆ ಗಂಟೆಗಂಟೆಗೆ ವಾಹನ ದಟ್ಟಣೆ ಕಂಡುಬಂದಿತು.  ಕೆಲಸ ಮುಗಿಸಿ ಮನೆಗೆ ಹೊರಟವರು ಮಳೆಗೆ ಸಿಕ್ಕಿಕೊಳ್ಳುವ ಆತಂಕದಲ್ಲಿದ್ದರು. ನಂತರ ಸ್ವಲ್ಪ ಮಳೆ ಬಿಡುವು ನೀಡಿತು. 

ಈ ಮಧ್ಯೆ ಇಂದಿನಿಂದ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ದಕ್ಷಿಣ ಒಳನಾಡಿನ ಹಲವೆಡೆ, ಕರಾವಳಿಯ ಕೆಲವೆಧಿಡೆ, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಜಿಲ್ಲೆಯ ಕೆಲವು ಕಡೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೊಅಲರ್ಟ್‌ ನೀಡಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪಿಯೂಷ್ ಗೋಯಲ್; ಭಾರತದ ಉಜ್ವಲ ಭವಿಷ್ಯಕ್ಕೆ ಇದು ಶುಭ ಸೂಚನೆ

ವಿಬಿ-ಜಿ ರಾಮ್ ಜಿ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಪ್ರಧಾನಿ ಮೋದಿ ಹೆದರಿದ್ದು, ದೇಶವನ್ನೇ ಮಾರಿದ್ದಾರೆ: ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ರಾಹುಲ್ ಗಾಂಧಿ ಟೀಕೆ

ಸಿನಿ ಪ್ರಿಯರಿಗೆ ಈ ವಾರ ಭರ್ಜರಿ ಸುದ್ದಿ: 5 ಬಹು ನಿರೀಕ್ಷಿತ ಚಿತ್ರಗಳು OTTಗೆ ಲಗ್ಗೆ, 4 ಸೂಪರ್ ಹಿಟ್!

ಆರು ಕ್ಷೇತ್ರಗಳ ಚುನಾವಣಾ ಉಸ್ತುವಾರಿಗೆ ಅಣ್ಣಾಮಲೈ ರಾಜೀನಾಮೆ; ಕಾರಣವೇನು?

SCROLL FOR NEXT