ಬೆಂಗಳೂರಿನ ಎಂ ಜಿ ರಸ್ತೆಯಲ್ಲಿ ಇಂದು ಮಳೆಗೆ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ನೀರಿನಲ್ಲಿಯೇ ಸಾಗಿದ ಪರಿಸ್ಥಿತಿ 
ರಾಜ್ಯ

ಬೆಂಗಳೂರಿನಲ್ಲಿ ಸಂಜೆ ಧಾರಾಕಾರ ಮಳೆ, ಹಲವೆಡೆ ಟ್ರಾಫಿಕ್‌ ದಟ್ಟಣೆ! ಪೊಲೀಸರ ಸಲಹೆ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನ 2 ಗಂಟೆಯವರೆಗೂ ಬಿಸಿಲು ಕಾಣಿಸಿಕೊಂಡಿದ್ದರೂ, ನಂತರ ಏಕಾಏಕಿ ಜೋರು ಮಳೆ ಸುರಿಯಲಾರಂಭಿಸಿತು.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನ 2 ಗಂಟೆಯವರೆಗೂ ಬಿಸಿಲು ಕಾಣಿಸಿಕೊಂಡಿದ್ದರೂ, ನಂತರ ಏಕಾಏಕಿ ಜೋರು ಮಳೆ ಸುರಿಯಲಾರಂಭಿಸಿತು. ಶಿವಾಜಿನಗರ, ಕೆ. ಆರ್. ಸರ್ಕಲ್, ಕೆ.ಆರ್. ಮಾರುಕಟ್ಟೆ, ಮೆಜೆಸ್ಟಿಕ್, ಶಾಂತಿನಗರ, ಎಂಜಿ ರಸ್ತೆ, ಬಿನ್ನಿಗಾನಹಳ್ಳಿ ಮೊದಲಾದ ಕಡೆಗಳಲ್ಲಿ ಭರ್ಜರಿ ಮಳೆಯಾಗಿದ್ದು,ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು.

 ಸಂಜೆ 4-30ರ ಸುಮಾರಿನಲ್ಲಿಯೇ ಮಬ್ಬು ಕತ್ತಲಿನ ಅನುಭವವಾಯಿತು. ಇದು ವಾಹನ ಸವಾರರಿಗೆ ಸಮಸ್ಯೆ ಉಂಟು ಮಾಡಿತು. ಮಳೆಯಿಂದಾಗಿ ನಗರದಲ್ಲಿಯೂ ಟ್ರಾಫಿಕ್‌ ಹೆಚ್ಚಳವಾಗಿ, ಕೆಲವೆಡೆ ಗಂಟೆಗಂಟೆಗೆ ವಾಹನ ದಟ್ಟಣೆ ಕಂಡುಬಂದಿತು.  ಕೆಲಸ ಮುಗಿಸಿ ಮನೆಗೆ ಹೊರಟವರು ಮಳೆಗೆ ಸಿಕ್ಕಿಕೊಳ್ಳುವ ಆತಂಕದಲ್ಲಿದ್ದರು. ನಂತರ ಸ್ವಲ್ಪ ಮಳೆ ಬಿಡುವು ನೀಡಿತು. 

ಈ ಮಧ್ಯೆ ಇಂದಿನಿಂದ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ದಕ್ಷಿಣ ಒಳನಾಡಿನ ಹಲವೆಡೆ, ಕರಾವಳಿಯ ಕೆಲವೆಧಿಡೆ, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಜಿಲ್ಲೆಯ ಕೆಲವು ಕಡೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೊಅಲರ್ಟ್‌ ನೀಡಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT