ಎಂಬಿ ಪಾಟೀಲ್ 
ರಾಜ್ಯ

MSIL ಚಿಟ್ ಫಂಡ್ ನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ರಾಜ್ಯ ಸರ್ಕಾರದ ಚಿಂತನೆ

ಗ್ಯಾರಂಟಿ ಯೋಜನೆಗಳಡಿ ಮಹಿಳೆಯರು ಹಣಕಾಸಿನ ನೆರವು  ಪಡೆಯುತ್ತಿರುವುದರಿಂದ, ರಾಜ್ಯ ಸರ್ಕಾರ MSIL ಚಿಟ್ ಫಂಡ್ ವ್ಯವಹಾರವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿ ಆ್ಯಪ್ ಬಿಡುಗಡೆಯಾಗಲಿದೆ.

ಬೆಂಗಳೂರು: ಗ್ಯಾರಂಟಿ ಯೋಜನೆಗಳಡಿ ಮಹಿಳೆಯರು ಹಣಕಾಸಿನ ನೆರವು  ಪಡೆಯುತ್ತಿರುವುದರಿಂದ, ರಾಜ್ಯ ಸರ್ಕಾರ MSIL ಚಿಟ್ ಫಂಡ್ ವ್ಯವಹಾರವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿ ಆ್ಯಪ್ ಬಿಡುಗಡೆಯಾಗಲಿದೆ.  

ಪ್ರತಿ ಕುಟುಂಬ ಪ್ರತಿ ತಿಂಗಳು ಅಂದಾಜು ರೂ, 4,000 ರಿಂದ 5,000 ಹಣಕಾಸು ನೆರವು ಪಡೆಯುತ್ತಿದ್ದು, ಜನರಲ್ಲಿ ಉಳಿತಾಯ ಮನೋಭಾವ ಬೆಳೆಸಿ ಆರ್ಥಿಕ ಪ್ರಗತಿ ಸಾಧನೆ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಗೃಹ ಲಕ್ಷ್ಮಿ ಯೋಜನೆಯಡಿ 93 ಲಕ್ಷ ಮಹಿಳೆಯರು ಪ್ರತಿ ತಿಂಗಳು 2,000 ರೂ.ಪಡೆಯುತ್ತಿದ್ದು,  ಉಚಿತ ಬಸ್ ಪ್ರಯಾಣದ  ಶಕ್ತಿ ಯೋಜನೆಯಿಂದಲೂ ಹಣವನ್ನು ಉಳಿಸುತ್ತಿದ್ದಾರೆ. ಈ ಮಹಿಳೆಯರು ಉಳಿತಾಯ ಆರಂಭಿಸುವಂತೆ ಯೋಜನೆ ರೂಪಿಸಲಾಗಿದೆ. 

ಇದಕ್ಕಾಗಿ, 305 ಕೋಟಿ ರೂಪಾಯಿ ವಹಿವಾಟು ಮತ್ತು 22,000 ಕಡಿಮೆ ಚಂದಾದಾರರನ್ನು ಹೊಂದಿರುವ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) ನಡೆಸುತ್ತಿರುವ ಚಿಟ್ ಫಂಡ್ ವ್ಯವಹಾರವನ್ನು ವಿಸ್ತರಿಸಲು ಮುಂದಾಗಿದೆ. 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್, ಎಂಎಸ್ ಐಎಲ್  ಭಾರತದ ಪ್ರಮುಖ ಚಿಟ್ ಫಂಡ್ ಮಾಡುವ ಮೂಲಕ ಚಿಟ್ ಫಂಡ್ ವಲಯವನ್ನು ಉನ್ನತ ಸ್ಥಾನಕ್ಕೆ ಒಯ್ಯಲು ಕರ್ನಾಟಕವು ಮಹತ್ತರ ಪ್ರಯಾಣ ಆರಂಭಿಸುತ್ತಿದೆ.ಎಂಎಸ್ ಐಎಲ್  ವಿಶ್ವಾಸಾರ್ಹ ಬ್ರ್ಯಾಂಡ್, ಸುಭದ್ರ, ಸುರಕ್ಷಿತ ಮತ್ತು ಪ್ರಗತಿ ವರ್ಧಕ, AI ಪ್ಲಾಟ್ ಫಾರ್ಮ್ ನಲ್ಲಿ ಇರಲಿದೆ ಕೆಲವೇ ವರ್ಷಗಳಲ್ಲಿ ರೂ. 300 ಕೋಟಿಯಿಂದ 10,000 ಕೋಟಿ ವಹಿವಾಟು ತಲುಪುವ ಗುರಿ ಹೊಂದಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT