ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚನೆ: ರಾಜ್ಯ ಸರ್ಕಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.

ಈ ಬಾರಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚನೆ ನೀಡಿದ್ದಾರೆ.

ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ. ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು, ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ಸೂಚಿಸಿದ್ದಾರೆ.

ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆ ಮತ್ತು ಅಣಕು ಕಾರ್ಯಾಚರಣೆಗಳನ್ನೂ ನಡೆಸಿ ಸಿಬ್ಬಂದಿಯನ್ನು ಸಜ್ಜುಗೊಳಿಸುವಂತೆಯೂ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT