ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚನೆ: ರಾಜ್ಯ ಸರ್ಕಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.

ಈ ಬಾರಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚನೆ ನೀಡಿದ್ದಾರೆ.

ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ. ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು, ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ಸೂಚಿಸಿದ್ದಾರೆ.

ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆ ಮತ್ತು ಅಣಕು ಕಾರ್ಯಾಚರಣೆಗಳನ್ನೂ ನಡೆಸಿ ಸಿಬ್ಬಂದಿಯನ್ನು ಸಜ್ಜುಗೊಳಿಸುವಂತೆಯೂ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

WPL 2026: 4 ಓವರ್, 1 ಮೇಡನ್.. ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್.. RCBಯ ಲೇಡಿ ಹೇಜಲ್ವುಡ್ Lauren Bell!

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

SCROLL FOR NEXT