BBMP ವಾರ್ ರೂಂಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ 
ರಾಜ್ಯ

ಬೆಂಗಳೂರಿನಲ್ಲಿ ಭಾರಿ ಮಳೆ: ಮಧ್ಯರಾತ್ರಿ BBMP ವಾರ್ ರೂಂಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ

ಬೆಂಗಳೂರಿನಲ್ಲಿ ನಿನ್ನೆ ಇಡೀ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಇಡೀ ನಗರದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದ್ದು, ಮಳೆ ಪರಿಸ್ಥಿತಿಯ ಮಾಹಿತಿ ಪಡೆಯಲು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಬಿಬಿಎಂಪಿ ವಾರ್ ರೂಂಗೆ ಭೇಟಿ ನೀಡಿದ್ದರು.

ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಇಡೀ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಇಡೀ ನಗರದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದ್ದು, ಮಳೆ ಪರಿಸ್ಥಿತಿಯ ಮಾಹಿತಿ ಪಡೆಯಲು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಬಿಬಿಎಂಪಿ ವಾರ್ ರೂಂಗೆ ಭೇಟಿ ನೀಡಿದ್ದರು.

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹಡ್ಸನ್ ವೃತ್ತದ ಬಿಬಿಎಂಪಿ ಕೇಂದ್ರ ಕಚೇರಿಯ ವಾರ್ ರೂಂಗೆ ಮಧ್ಯರಾತ್ರಿ ಹಠಾತ್ ಭೇಟಿ ನೀಡಿ, ಬೆಂಗಳೂರಲ್ಲಿ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಗರದ ಪರಿಸ್ಥಿತಿ, ಅನಾಹುತ, ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ ನಗರದ ವಿವಿದೆಡೆಯಿಂದ ಮಳೆಯಿಂದ ತೊಂದರೆಗೊಳಗಾದ ಪ್ರದೇಶಗಳ ಮಾಹಿತಿ ಪಡೆದ ಅವರು, ತಕ್ಷಣ ನಾಗರಿಕರ ಸಮಸ್ಯೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಮಾತನಾಡಿದ ಅವರು, ಮಳೆ ಬರುವ ನಿರೀಕ್ಷೆ ಇತ್ತು. ಜಕ್ಕೂರು, ನಂದಿನಿ ಲೇಔಟ್, ನಾಗೇನಹಳ್ಳಿ, ಕೊಟ್ಟಿಗೆಪಾಳ್ಯ, ಗುಟ್ಟಹಳ್ಳಿ, ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಕಡೆ 2-3 ಗಂಟೆ ಜಾಸ್ತಿ ಮಳೆ ಬಂದಿದೆ. ಈ ಕಡೆ ಎಲ್ಲ ಟ್ರಾಫಿಕ್ ಸಮಸ್ಯೆ ಇದ್ದೇ ಇರುತ್ತದೆ. ಎಲ್ಲಿಯೂ ಹಾನಿ ಆಗಬಾರದು, ಕ್ಯಾನಲ್‌ಗಳಲ್ಲಿ ಸರಿಯಾಗಿ ನೀರು ಹರಿಯಬೇಕು ಎಂದು ಎಲ್ಲಾ ಅಧಿಕಾರಿಗಳು, ಇಂಜಿನಿಯರ್‌ಗಳು ಫೀಲ್ಡ್‌ನಲ್ಲಿದ್ದು ಕೆಲಸ ಮಾಡುತ್ತಿದ್ದಾರೆ.

ಯಾವ್ಯಾವ ರಾಜಕಾಲುವೆಯಲ್ಲಿ ಎಷ್ಟು ನೀರು ಹರಿಯುತ್ತಿದೆ ಎನ್ನುವ ಮಾಹಿತಿಯೂ ಬರುತ್ತಿದೆ. ಈಗಾಗಲೇ ನೂರಾರು ದೂರುಗಳು ಬಂದಿವೆ. ತಕ್ಷಣ ಅಟೆಂಡ್‌ ಮಾಡುತ್ತಿದ್ದಾರೆ. ನಾನೂ ವಲಯ ಆಯುಕ್ತರಿಗೆ ಮಾತನಾಡಿ, ನಾಗರಿಕರಿಗೆ ಸಮಸ್ಯೆ ಆಗದಂತೆ ಸೂಚಿಸಿದ್ದೇನೆ. ಏರ್‌ಪೋರ್ಟ್‌ ರಸ್ತೆಯಲ್ಲಿ ಸಂಚಾರ ದಟ್ಟಣೆ ಆಗಿದೆ, ಆಯುಕ್ತರೇ ಅಲ್ಲಿದ್ದು ಸಮಸ್ಯೆ ಬಗೆಹರಿಸುತ್ತಿದ್ದಾರೆ.

ಆರ್‌ಆರ್‌ ನಗರ ಕೊನೇ ಪಾಯಿಂಟ್‌ ಆಗಿರುವುದರಿಂದ ಎಲ್ಲಾ ನೀರು ಅಲ್ಲಿ ಹೋಗಿ ಓವರ್‌ಫ್ಲೋ ಆಗಿ ಸಮಸ್ಯೆ ಆಗಿರುವ ದೂರು ಬಂದಿದೆ. ಅದನ್ನು ಪರಿಹರಿಸಲಾಗುತ್ತದೆ. ಇಷ್ಟು ಬಿಟ್ಟರೆ ಹೆಚ್ಚಿನ ಸಮಸ್ಯೆ ಆಗಿಲ್ಲ. ಮಳೆ ಬಂದರೆ ಉತ್ತಮ, ಆದರೆ ಮುಂಜಾಗ್ರತೆಯಿಂದಲೂ ಇರುವಂತೆ ಸೂಚಿಸಿದ್ದೇನೆ ಎಂದರು. ಕೆಲವು ಕಡೆ ಅಂಡರ್‌ಪಾಸ್‌ಗಳನ್ನು ಮುಚ್ಚಲಾಗಿದೆ. ವಾರ್‌ ರೂಂ ತಂಡ ದೂರು ಬಂದ ಕೂಡಲೇ ಸ್ಪಂದಿಸುತ್ತಿದ್ದಾರೆ ಎಂದರು.

ಧರೆಗುರುಳಿದ ನಾಲ್ಕು ಮರ
ಮಳೆ ಅವಾಂತರದಿಂದ ನಾಲ್ಕು ಮರಗಳು ಧರೆಗುರುಳಿವೆ. ಬೆಂಗಳೂರು ಪೂರ್ವ ವಲಯದಲ್ಲಿ 1, ಮಹದೇವಪುರ ವಲಯದಲ್ಲಿ ಒಂದು ಮರ, ಬೆಂಗಳೂರು ದಕ್ಷಿಣದಲ್ಲಿ ಎರಡು ಮರ ಧರೆಗುರುಳಿವೆ. ರಸ್ತೆಯಲ್ಲಿ ಚರಂಡಿ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡಿದರು. ನಗರದ ಏಳು ವಲಯಗಳ ಪೈಕಿ 18 ಕಡೆ ಡ್ರೈನೇಜ್ ನೀರು ರಸ್ತೆಗೆ ಹರಿಯುತ್ತಿತ್ತು. 10 ಕಂಪ್ಲೇಟ್ ಬಂದಿದೆ, ಈ ಪೈಕಿ 6 ದೂರುಗಳನ್ನು ಪರಿಹರಿಸಲಾಗಿದೆ ಎಂದು ಬಿಬಿಎಂಪಿ ವಾರ್‌ ರೂಂ ಅಧಿಕಾರಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮಾಹಿತಿ ನೀಡಿದರು. 

ಮುಳುಗಿದ ವಾಹನಗಳು
ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಸ್ಥಾನ ಬಳಿ ದ್ವಿಚಕ್ರವಾಹನ, ಗೂಡ್ಸ್‌ ವಾಹನ ಸೇರಿದಂತೆ ಹಲವು ವಾಹನಗಳು ನೀರಿನಲ್ಲಿ ಮುಳುಗಿವೆ. ಸುತ್ತಮುತ್ತಲಿನ ಪ್ರದೇಶದ ಅಂಗಡಿ ಮುಂಗಟ್ಟುಗಳಿಗೂ ನೀರು ನುಗ್ಗಿ ವ್ಯಾಪಾರಸ್ಥರು ಪರದಾಡುವಂತಾಯಿತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT