ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಬಳ್ಳಾಪುರ: ಫೋನ್ ಬಳಸದಂತೆ ಬೈದ ಪೋಷಕರು; ಮನನೊಂದು ಬಾಲಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೊಬೈಲ್ ಫೋನ್ ಚಟದ ಬಗ್ಗೆ ಪೋಷಕರು ಗದರಿಸಿದ್ದರಿಂದ ಮನನೊಂದು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೊಬೈಲ್ ಫೋನ್ ಚಟದ ಬಗ್ಗೆ ಪೋಷಕರು ಗದರಿಸಿದ್ದರಿಂದ ಮನನೊಂದು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮೃತನನ್ನು 15 ವರ್ಷದ ಲೋಕೇಶ್ ಎಂದು ಗುರುತಿಸಲಾಗಿದ್ದು, ಚಿಟ್ಟಾವಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಲೋಕೇಶ್‌ನ ತಂದೆ ತನ್ನ ಮಗ ಹೆಚ್ಚಿನ ಸಮಯವನ್ನು ಮೊಬೈಲ್ ಫೋನ್‌ನಲ್ಲಿ ಕಳೆಯುವುದರ ಬಗ್ಗೆ ಚಿಂತಿತರಾಗಿದ್ದರು ಮತ್ತು ಆತ ಅಧ್ಯಯನದತ್ತ ಗಮನ ಹರಿಸಬೇಕೆಂದು ಬಯಸಿದ್ದರು.

ಇದೇ ವಿಚಾರವಾಗಿ ಸೋಮವಾರ ತಂದೆ ಮೊಬೈಲ್ ಬಳಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ, ಇಬ್ಬರೂ ಜಗಳವಾಡಿದ್ದಾರೆ. ಈ ವೇಳೆ ಬಾಲಕ ಕೋಪದಿಂದ ಮನೆಯಿಂದ ಹೊರಬಂದಿದ್ದಾನೆ.

ಬಳಿಕ ಗ್ರಾಮದ ನಿರ್ಜನ ಪ್ರದೇಶಕ್ಕೆ ತೆರಳಿದ ಲೋಕೇಶ್, ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT