ಹೈಕೋರ್ಟ್ 
ರಾಜ್ಯ

ವಿಟಿಯು ಕುಲಪತಿಯಾಗಿ ವಿದ್ಯಾಶಂಕರ್ ನೇಮಕ: ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಎಸ್ ವಿದ್ಯಾಶಂಕರ್ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಎಸ್ ವಿದ್ಯಾಶಂಕರ್ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು ಈ ಹಿಂದೆ ತೀರ್ಪನ್ನು ಕಾಯ್ದಿರಿಸಿತ್ತು.  ವಿದ್ಯಾಶಂಕರ್ ಅವರ ನೇಮಕಾತಿಗೆ ಸಂಬಂಧಿಸಿದ ಕಾನೂನುಬದ್ಧತೆ ಅಥವಾ ಸಂಪೂರ್ಣ ಪ್ರಕ್ರಿಯೆಯ ಬಗ್ಗೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಈ ತೀರ್ಪು ಅರ್ಜಿಗೆ ಮಾತ್ರ ಸಂಬಂಧಿಸಿದೆ ಮತ್ತು ಇತರ ಯಾವುದೇ ಸಂಬಂಧಿತ ಪ್ರಕರಣದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಒತ್ತಿ ಹೇಳಿದೆ. ನಿವೃತ್ತರಾಗಿರುವ ಮೈಸೂರು ವಿವಿ ಮಾಜಿ ಹಂಗಾಮಿ ಉಪಕುಲಪತಿ ಪ್ರೊ.ಬಿ.ಶಿವರಾಜ್ ವಿದ್ಯಾಶಂಕರ್ ನೇಮಕಾತಿ ಸಂಬಂಧ ಅರ್ಜಿ ಸಲ್ಲಿಸಿದ್ದರು.

ವಿಟಿಯು ಕುಲಪತಿಗಳ ನೇಮಕಕ್ಕಾಗಿ ರಾಜ್ಯ ಸರ್ಕಾರದ ಶೋಧನಾ ಸಮಿತಿ ರಚನೆ ಯುಜಿಸಿ ನಿಯಮಗಳು ಮತ್ತು ವಿಟಿಯು ಕಾಯ್ದೆಯ ಸೆಕ್ಷನ್ 13 ರ ಅಡಿಯಲ್ಲಿ ನಿಯಮಬಾಹಿರವಾಗಿದೆ. ಏಕೆಂದರೆ ಯುಜಿಸಿ ಅರ್ಹತೆ  ಹೊಂದಿರುವ ಪ್ರತಿನಿಧಿಯನ್ನು ಇದರಲ್ಲಿ ಸೇರಿಸಿಲ್ಲ ಎಂಬುದು ಅರ್ಜಿದಾರರ ವಾದವಾಗಿತ್ತು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಮತ್ತು ಯುಜಿಸಿಯ ಮಾನದಂಡಗಳನ್ನು ಪೂರೈಸಿರುವವರನ್ನು ವಿಟಿಯು ಕುಲಪತಿಯಾಗಿ ನೇಮಕ ಮಾಡಬೇಕು ಎಂಬುದು ಅವರ ಒತ್ತಾಯವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT