ಜಿ ಪರಮೇಶ್ವರ 
ರಾಜ್ಯ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲೇ ಸದಾಶಿವ ಆಯೋಗದ ವರದಿ ಮಂಡಿಸಲು ಸಿಎಂಗೆ ಮನವಿ: ಜಿ ಪರಮೇಶ್ವರ

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಒಳ ಮೀಸಲಾತಿ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಮಂಗಳವಾರ ತಿಳಿಸಿದ್ದಾರೆ.

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿ ಮಂಡಿಸಿ ಒಳ ಮೀಸಲಾತಿ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಮಂಗಳವಾರ ತಿಳಿಸಿದ್ದಾರೆ.

ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಕುರಿತಂತೆ ಪರಿಶಿಷ್ಟ ಜಾತಿಗೆ ಸೇರಿದ ಸಚಿವರು ಮತ್ತು ಶಾಸಕರು ನಡೆಸಿದ ಸಭೆ ಬಳಿಕ ಅವರು ಮಾತನಾಡಿದರು.

'ಚುನಾವಣೆ ಸಂದರ್ಭದಲ್ಲಿ ಒಳ ಮೀಸಲಾತಿ ಕುರಿತು ಚಿತ್ರದುರ್ಗ ನಗರದಲ್ಲಿ ಎಸ್‌ಸಿ-ಎಸ್‌ಟಿ ಸಮಾವೇಶ ನಡೆಸಲಾಗಿತ್ತು. ಆಗ ಹತ್ತು ಹಲವು ಘೋಷಣೆಗಳನ್ನು ಮಾಡಿದ್ದೆವು. ಅದರಲ್ಲಿ ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿಯೇ ಸದನದ ಮುಂದಿಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ' ಎಂದು ಹೇಳಿದರು.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿಯನ್ನು ಸದನದ ಮುಂದೆ ಮಂಡಿಸುವಂತೆ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಪರಮೇಶ್ವರ ತಿಳಿಸಿದರು.

ಸಮಾಜ ಕಲ್ಯಾಣ ಸಚಿವ ಡಾ. ಎಚ್‌ಸಿ ಮಹದೇವಪ್ಪ, ಆಹಾರ ಸಚಿವ ಕೆಎಚ್ ಮುನಿಯಪ್ಪ, ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ನಮ್ಮಲ್ಲಿ ಕೆಲವರು ಈ ವಿಷಯವನ್ನು ಸಿಎಂ ಗಮನಕ್ಕೆ ತಂದಿದ್ದೇವೆ. ಈ ಬಗ್ಗೆ ಸಮಾಜದ ಮುಖಂಡರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ನ್ಯಾ. ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ ವಿಚಾರವಾಗಿ ತೀವ್ರ ಸ್ವರೂಪದ ಹೋರಾಟ ನಡೆಸಿ, ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮಾದಿಗ ಸಮುದಾಯದ ಮುಖಂಡರಿಗೆ ಆಹಾರ ಇಲಾಖೆ ಸಚಿವ ಕೆಹೆಚ್ ಮುನಿಯಪ್ಪ ಸೋಮವಾರ ಕರೆ ನೀಡಿದ್ದಾರೆ. 

ಸದಾಶಿವ ಆಯೋಗದ ಶಿಫಾರಸು ಜಾರಿಗಾಗಿ ತೀವ್ರ ಆಂದೋಲನದ ಅಗತ್ಯವಿದೆ. ನಿಮ್ಮ ಸ್ಥಳೀಯ ಶಾಸಕರ ಮನೆಗೆ ಮುತ್ತಿಗೆ ಹಾಕಿ. ಅವರಿಗೆ ಕಾರ್ಯಕ್ರಮಗಳನ್ನು ನಡೆಸಲು ಬಿಡಬೇಡಿ. ಸಚಿವನಾಗಿದ್ದುಕೊಂಡೇ ನಾನು ನಿಮಗೆ ಈ ರೀತಿ ಹೇಳುತ್ತಿದ್ದೇನೆ. ಹೀಗೆ ಹೇಳುವ ಸಂದರ್ಭ ಬಂದಿದೆ ಎಂದು ಕರ್ನಾಟಕ ಆದಿಜಾಂಬವ ಸಾಂಸ್ಕೃತಿಕ ಸಮಿತಿಯ ಮುಖಂಡರ ಸಭೆಯಲ್ಲಿ ಮುನಿಯಪ್ಪ ಅವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT