ಸಾಂದರ್ಭಿಕ ಚಿತ್ರ 
ರಾಜ್ಯ

ಆಂಧ್ರ ಪ್ರದೇಶದ ಉದ್ಯಮಿಗೆ ನಿವೇಶನ ಕೊಡಿಸುವುದಾಗಿ ವಂಚನೆ: ಬೆಂಗಳೂರಿನ ಐವರ ಬಂಧನ

ನಿವೇಶನ ಕೊಡಿಸುವುದಾಗಿ ಆಂಧ್ರ ಪ್ರದೇಶ ಮೂಲದ ಉದ್ಯಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು 1.90 ಕೋಟಿ ರೂ. ವಂಚಿಸಿದ್ದ ಐವರು ಆರೋಪಿಗಳನ್ನು ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಿವೇಶನ ಕೊಡಿಸುವುದಾಗಿ ಆಂಧ್ರ ಪ್ರದೇಶ ಮೂಲದ ಉದ್ಯಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು 1.90 ಕೋಟಿ ರೂ. ವಂಚಿಸಿದ್ದ ಐವರು ಆರೋಪಿಗಳನ್ನು ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ನಿವಾಸಿಗಳಾದ ಸಂಜಯ್‌ ಶ್ರೀನಿವಾಸ್‌, ಲೋಕನಾಥಾಚಾರಿ, ಪ್ರಭಾಕರ್‌ ರೆಡ್ಡಿ, ರಾಜೇಶ್‌ ಮತ್ತು ಪೊಲ್ವಿನ್‌ ರವಿಕುಮಾರ್‌ ಬಂಧಿತರು. ಆರೋಪಿಗಳಿಂದ 65 ಲಕ್ಷ ರೂ. ನಗದು, 8.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಾಲ್ಕು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಆಂಧ್ರಪ್ರದೇಶ ಮೂಲದ ಉದ್ಯಮಿ ರಾಧಾಕೃಷ್ಣ ಎಂಬವರನ್ನು ಸಂಪರ್ಕಿಸಿದ್ದ ಆರೋಪಿಗಳು, ತಿರುಪತಿಯಲ್ಲಿ ನಿವೇಶನ ಕೊಡಿಸುತ್ತೇನೆ. ವ್ಯವಹಾರ ಮಾತನಾಡಲು ಬೆಂಗಳೂರಿಗೆ ಬರುವಂತೆ ಕರೆಸಿಕೊಂಡಿದ್ದಾರೆ.

ಕೃಷ್ಣ ಅವರು ತಮ್ಮ ಸ್ನೇಹಿತ ಶಿವಕುಮಾರ್ ಅವರೊಂದಿಗೆ ಬೆಂಗಳೂರಿಗೆ ಬಂದಿದ್ದರು. ಅವರು ಸಿಬಿಡಿಯ ಪ್ರತಿಷ್ಠಿತ ಹೋಟೆಲ್‌ನಲ್ಲಿ ಆರೋಪಿಗಳನ್ನು ಭೇಟಿಯಾಗಿದ್ದರು. ಆ ವ್ಯಕ್ತಿಗಳು ಕೃಷ್ಣ ಅವರಿಗೆ ಕೆಲವು ಆಸ್ತಿ ದಾಖಲೆಗಳನ್ನು ತೋರಿಸಿದರು ಮತ್ತು ಮಾಲೀಕರು ಕೆಆರ್ ಪುರಂನಲ್ಲಿದ್ದಾರೆ ಎಂದು ಹೇಳಿದರು. ರಾಧಾಕೃಷ್ಣ ಅವರನ್ನು ಹೋಟೆಲ್‌ನಲ್ಲಿ ಕಾಯುವಂತೆ ಹೇಳಿ ಶಿವಕುಮಾರ್  ಜೊತೆ ಮಾಲೀಕರ ಭೇಟಿ ಮಾಡಲು ಕರೆದುಕೊಂಡು ಹೋಗುವುದಾಗಿ ಹೇಳಿದರು. ಶಿವಕುಮಾರ್ ಜೊತೆ ನಗದು ಹಣದೊಂದಿಗೆ ಆರೋಪಿಗಳು ಕಾರಿನಲ್ಲಿ ತೆರಳಿದ್ದರು.

ಮಾರ್ಗಮಧ್ಯೆ ನಿಲ್ಲಿಸಿ ಶಿವಕುಮಾರ್ ಅವರಿಗೆ ಜ್ಯೂಸ್ ಕೊಡುವಂತೆ ಹೇಳಿದರು. ಶಿವಕುಮಾರ್ ಕಾರಿನಿಂದ ಕೆಳಗಿಳಿದಾಗ ಗ್ಯಾಂಗ್ ನಗದು ಸಮೇತ ಪರಾರಿಯಾಗಿದೆ. ಶಿವಕುಮಾರ್ ತನ್ನ ಸ್ನೇಹಿತನಿಗೆ ಅವ್ಯವಹಾರದ ಬಗ್ಗೆ ತಿಳಿಸಿ ಹೋಟೆಲ್‌ಗೆ ಮರಳಿದರು.

ಬಳಿಕ ಠಾಣೆಗೆ ಬಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಳವು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಠಾಣಾಧಿಕಾರಿ ಬಿ.ಭರತ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!