ಡಿ.ಕೆ ಶಿವಕುಮಾರ್ 
ರಾಜ್ಯ

ರಾಮನಗರ ಜಿಲ್ಲೆ ಹೆಸರು ಬದಲಿಸಲು ಮುಖ್ಯಮಂತ್ರಿಗೆ ಪ್ರಸ್ತಾವನೆ; ಮರು ನಾಮಕರಣ ಮಾಡುವುದು ಖಚಿತ: ಡಿಕೆಶಿ

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಒತ್ತಾಯಿಸಿ, ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಒತ್ತಾಯಿಸಿ, ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು,  ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸಮೀಕ್ಷೆ ಆರಂಭಿಸಿರುವುದಾಗಿ ತಿಳಿಸಿದರು. ಜಿಲ್ಲೆಗೆ ಮರು ನಾಮಕರಣ ಮಾಡುವುದು ಖಚಿತ ಎಂದ ಅವರು, ವೈಯಕ್ತಿಕ ನೆಲೆಯಲ್ಲಿ ಸಮೀಕ್ಷೆ ಮಾಡುತ್ತಿದ್ದೇನೆ. ಈವರೆಗೆ ಸಮೀಕ್ಷೆಗೆ ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ರಾಮನಗರ ಜಿಲ್ಲೆಗೆ ಮರು ನಾಮಕರಣ ಮಾಡಿದ ನಂತರ ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲ್ಲೂಕುಗಳನ್ನು ಸ್ಯಾಟಲೈಟ್‌ ಟೌನ್‌ಗಳಾಗಿ ಅಭಿವೃದ್ಧಿಪಡಿಸಲು ಸರ್ಕಾರ ಯೋಜಿಸಿದೆ. ‘ನಮ್ಮ ಮೆಟ್ರೊ ವನ್ನು ಎಲ್ಲ ನಾಲ್ಕು ತಾಲ್ಲೂಕುಗಳಿಗೂ ವಿಸ್ತರಿಸಲು ಸಮೀಕ್ಷೆ ನಡೆಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT