ದಿನೇಶ್ ಗುಂಡೂರಾವ್ 
ರಾಜ್ಯ

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಬಗ್ಗೆ ಸರ್ಕಾರದಲ್ಲಿ ಚರ್ಚೆ

ಬೆಂಗಳೂರು-ಮಂಗಳೂರು ನಡುವೆ ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಅಸ್ತಿತ್ವಕ್ಕೆ ಬರುವುದು ಮಂಗಳೂರು ಹಾಗೂ ಈ ಮಾರ್ಗದಲ್ಲಿ ಬರುವ ಎಲ್ಲಾ ನಗರಗಳ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಬೆಂಗಳೂರು: ಬೆಂಗಳೂರು-ಮಂಗಳೂರು ನಡುವೆ ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಅಸ್ತಿತ್ವಕ್ಕೆ ಬರುವುದು ಮಂಗಳೂರು ಹಾಗೂ ಈ ಮಾರ್ಗದಲ್ಲಿ ಬರುವ ಎಲ್ಲಾ ನಗರಗಳ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್, ಯೋಜನೆಯ ಸಲಹಾ ಮತ್ತು ಫೆಸಿಲಿಟೇಷನ್ ಸಂಸ್ಥೆ ಯುರೋಪಿಯನ್ ಉದ್ಯಮ ಹಾಗೂ ತಂತ್ರಜ್ಞಾನ ಕೇಂದ್ರ (ಇಬಿಟಿಸಿ) ನ ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಮಾತನಾಡಿದರು. ಈ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮಿ ಹೆಬ್ಬಾಳ್ಕರ್ ಸಹ ಭಾಗಿಯಾಗಿದ್ದರು. 

ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಯೋಜನೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ 6-8 ಪಥಗಳ ಹೈಸ್ಪೀಡ್ ಕಾರಿಡಾರ್ ನಿರ್ಮಾಣದ ಪ್ರಸ್ತಾವನೆ ಹೊಂದಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಗಳನ್ನು ಹೊಂದಿರುವ  ದಿನೇಶ್ ಗುಂಡೂರಾವ್, ಕಾರಿಡಾರ್ ಮಾರ್ಗ ನಕ್ಷೆಯನ್ನು ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಸಭೆಯಲ್ಲಿ ಭರವಸೆ ನೀಡಿದರು.

ಮಂಗಳೂರಿನ ಸುಸ್ಥಿರ ಅಭಿವೃದ್ಧಿಗೆ ಸಹಕಾರಿಯಾಗುವ ಇಂತಹ ಯೋಜನೆಗಳಿಗೆ ರಾಜ್ಯ ಸರ್ಕಾರ ಉತ್ತೇಜನ ನೀಡಲಿದೆ ಎಂದು ಹೇಳಿರುವ ಸಚಿವರು, ಈ ರೀತಿಯ ಉದ್ಯಮಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT