ಸುವರ್ಣ ಸೌಧ 
ರಾಜ್ಯ

ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4 ರಿಂದ 15ರ ವರೆಗೆ ಚಳಿಗಾಲದ ಅಧಿವೇಶನ

ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4 ರಿಂದ 15ರ ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನಿಸಲಾಗಿದೆ.

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4 ರಿಂದ 15ರ ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನಿಸಲಾಗಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್ ಅವರು, ಬೆಳಗಾವಿಯಲ್ಲಿ ಡಿಸೆಂಬರ್ 4 ರಿಂದ ಡಿಸೆಂಬರ್ 15ರ ವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆ ನಿರ್ಧರಿಸಿದೆ ಎಂದರು.

ಸಚಿವ ಸಂಪುಟ ಸಭೆಯಲ್ಲಿ ಬರಗಾಲದ ಬಗ್ಗೆಯೂ ವಿಸ್ತೃತ ವಾಗಿ ಚರ್ಚೆ ಮಾಡಿದ್ದೇವೆ. ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿದ್ದೇವೆ, ಆದರೆ ಇದುವರೆಗೂ ಕೇಂದ್ರ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಇವತ್ತಿನ ಸಭೆಯಲ್ಲಿ ಕೇಂದ್ರ ಸರ್ಕಾರದ ನಡೆ ವಿರುದ್ಧ ಖಂಡನೆ ವ್ಯಕ್ತ ಪಡಿಸಿದ್ದೇವೆ ಎಂದರು.

ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರ ಗಳಲ್ಲಿ ಬರಗಾಲ ಪರಿಹಾರದ ಕೆಲಸಗಳು ಶುರುವಾಗಬೇಕು. ಈಗಾಗಲೇ 700-800 ಕೋಟಿ ರೂಪಾಯಿ ಜಿಲ್ಲಾಧಿಕಾರಿ ಗಳ ಅಕೌಂಟ್ ನಲ್ಲಿದೆ, ಬರಗಾಲ ನಿರ್ವಹಣೆಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸಿಎಂ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಕನಕಪುರ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು 10.38 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇನ್ಫೋಸಿಸ್ ಕಂಪನಿ ವತಿಯಿಂದ ಸಿಎಸ್ಆರ್ ಫಂಡ್ ನಿಂದ ಕನಕಪುರದ ತಾಯಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಎಚ್‌ ಕೆ ಪಾಟೀಲ್‌ ತಿಳಿಸಿದರು.

ಇನ್ನೂ ವಾಯುವ್ಯ ಸಾರಿಗೆಯಲ್ಲಿ16.20 ಕೋಟಿ ವೆಚ್ಚದಲ್ಲಿ 45 ಬಸ್ ಗಳ ಖರೀದಿಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಹುಬ್ಬಳ್ಳಿ ಬಿ.ಆರ್.ಟಿಗೆ 45 ಕೋಟಿ ರೂ. ವೆಚ್ಚದಲ್ಲಿ 100 ಬಸ್ ಖರೀದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ- ನ್ಯೂಜಿಲೆಂಡ್ 'ಮುಕ್ತ ವ್ಯಾಪಾರ ಒಪ್ಪಂದ' ಅಂತಿಮ: ಭಾರಿ ಪ್ರಮಾಣದ ಸುಂಕ ಕಡಿತ! Video

ಬಳ್ಳಾರಿ: ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಲವ್ವಿಡವ್ವಿ; ವಿಡಿಯೋ ಕಾಲ್ ಲೈವ್ನಲ್ಲೇ ಆತ್ಮಹತ್ಯೆಗೆ ಶರಣಾದ ಮುನ್ನಿ!

ಕೇರಳ: ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ವ್ಯಕ್ತಿಯ ಬಂಧನ

ಪುಟಿನ್‌ಗೆ ದೊಡ್ಡ ಹಿನ್ನಡೆ: ಮಾಸ್ಕೋ ಕಾರ್ ಬಾಂಬ್ ಸ್ಫೋಟದಲ್ಲಿ ರಷ್ಯಾದ ಜನರಲ್ ಸಾವು; ಉಕ್ರೇನ್‌ ಕೈವಾಡ ಶಂಕೆ!

ಪಾಟ್ನಾ ಹೊರವಲಯದಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ ಮೇಲೆ ಆಸಿಡ್ ದಾಳಿ!

SCROLL FOR NEXT